ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

Date:

Advertisements

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ ಬೆಳಿಗ್ಗೆ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದವು. ಇತ್ತ ನದಿಯ ದಂಡೆಯ ಮೇಲೆ ಸೇರಿದ್ದ ಜನ ಸಮೂಹದಿಂದಾಗಿ ನದಿಯಲ್ಲೇ ದಿಗಂಧನಕ್ಕೀಡಾದ ಘಟನೆ ಜರುಗಿದೆ.

ಶನಿವಾರ ರಾತ್ರಿ ಸುರ್ಯದ ಸುಬ್ರಹ್ಮಣ್ಯ ಭಟ್ ಎಂಬವರ ತೋಟದ ಬಳಿ ಪ್ರತ್ಯಕ್ಷಗೊಂಡ ಕಾಡಾನೆಗಳು ರಾತ್ರಿ ಸರಳೀಕಟ್ಟೆ ಪಿಲಿಗೂಡು, ಅಂಬೊಟ್ಟು ಮಾರ್ಗವಾಗಿ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿಂದ ನೇತ್ರಾವತಿ ನದಿಗಿಳಿದಿದೆ. ಮುಂಜಾನೆ ಉಪ್ಪಿನಂಗಡಿ ಬಳಿಯ ಕೂಟೇಲುವಿನ ನೇತ್ರಾವತಿ ನದಿಯಲ್ಲಿ ಕಾಡಾನೆಗಳು ಇರುವುದನ್ನು ಕಂಡು ಆನೆಗಳನ್ನು ನೋಡಲು ನದಿ ಕಡೆಗೆ ಜನ ತಂಡೋಪತಂಡವಾಗಿ ಆಗಮಿಸಿದರು. ಜನಸಂದಣಿ ಕಂಡು ಅತ್ತಿತ್ತ ಹೋಗಲಾಗದೇ ನದಿಯ ಮಧ್ಯದ ದಿನ್ನೆಯಲ್ಲಿ ನಿಂತುಕೊಂಡಿತ್ತು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

Advertisements

ಉಪ್ಪಿನಂಗಡಿಯಲ್ಲಿದ್ದ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಬೋಟನ್ನು ಬಳಸಿಕೊಂಡು ನದಿಗಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಗಳು ಜನವಸತಿಯತ್ತ ಬಾರದಂತೆ ಬೆದರಿಸಲು ಯತ್ನಿಸಿದರು. ಒಟ್ಟಿನಲ್ಲಿ ದಿನವಿಡೀ ನದಿಯಲ್ಲಿ ಬೋಟ್‌ ಮೂಲಕ ಗುಂಡು ಹಾರಿಸುತ್ತಾ ದಡದಲ್ಲಿ ಸುಡುಮದ್ದು ಸಿಡಿಸುವ ಮೂಲಕ ಆನೆಗಳನ್ನು ಉಪ್ಪಿನಂಗಡಿ ಪೇಟೆಯತ್ತ ಸಂಚರಿಸದಂತೆ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದರು. ಸಂಜೆ ಹೊತ್ತಿಗೆ ಆನೆ ನದಿಯಲ್ಲೇ ಕೂಟೇಲು ಕಡೆಯಿಂದ ಪಂಜಳ ತನಕ ಸಂಚರಿಸುವುದು ಹಿಂದಿರುಗುವುದು ಮಾಡುತ್ತಲೇ ಇದ್ದ ಕಾರಣ ಇಲಾಖಾಧಿಕಾರಿಗಳು ಆನೆ ಓಡಿಸುವ ಪ್ರಯತ್ನ ಮಾಡುತ್ತಿದ್ದರು. ಈ ಹರಸಾಹಸದಿಂದ ಕಾಡಾನೆಗಳು ಪಂಜಳ ತಲುಪಿವೆ.

ಸ್ಥಳದಲ್ಲಿ ಮಂಗಳೂರು ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ವಿಭೂತೆ, ಎಸಿಎಫ್‌ ಸುಬ್ಬಯ್ಯ ನಾಯ್ಕ ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪೆಲೀಸ್ ಅಧಿಕಾರಿಗಳು, ಸುಖಿತಾ ಶೆಟ್ಟಿ, ದಿನೇಶ್ ಬಿ. ನೇತೃತ್ವದ ಗೃಹರಕ್ಷಕ ದಳದ ತಂಡ ಘಟನಾ ಸ್ಥಳದಲ್ಲಿದ್ದು, ಆನೆಗಳ ಸಂಚಾರ ನಿಗಾವಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ...

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಎಂಬುದರ ಕುರಿತು ಒಂದು ದಿನದ ಕಾರ್ಯಗಾರ

ವಿದ್ಯಾರ್ಥಿಗಳು ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲೇಬೇಕಾಗಿದೆ. ಎಷ್ಟೇ ಕಷ್ಟ...

ಕಲಬುರಗಿ | ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ...

Download Eedina App Android / iOS

X