ಮಂಗಳೂರು | ಧಾರ್ಮಿಕ ಗುರು, ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರತ್ ತಂಙಳ್ ನಿಧನ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರತ್ ತಂಙಲ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾಗಿದ್ದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯ್ಯದ್ ಫಝಲ್ ಕೋಯಮ್ಮ ಕೂರತ್ ತಂಙಲ್ ಪ್ರಸ್ತುತ ಉಳ್ಳಾಲದ ಖಾಝಿಯಾಗಿದ್ದರು.

Advertisements

ಇಂದು ಮಧ್ಯಾಹ್ನ ಉಳ್ಳಾಲದ ಸೈಯದ್ ಮದನಿ ದರ್ಗಾ ವಠಾರದಲ್ಲಿ ಅವರು ಭಾಗವಹಿಸುವ ಕಾರ್ಯಕ್ರಮವು ನಿಗದಿಯಾಗಿತ್ತು. ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದರು.

ಕೇರಳದ ಮನೆಯಿಂದ ಮಂಗಳೂರಿಗೆ ಹೊರಡಲು ತಯಾರಿ ನಡೆಸುತ್ತಿದ್ದ ವೇಳೆ ಫಝಲ್ ಕೋಯಮ್ಮ ತಂಙಲ್ ಹೃದಯಸ್ತಂಭನಕ್ಕೀಡಾಗಿದ್ದಾರೆ. ಕೂಡಲೇ ಮನೆಯಲ್ಲಿದ್ದವರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷಿಸಿದ ವೈದ್ಯರು ನಿಧನರಾಗಿರುವುದನ್ನು ದೃಢಪಡಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ರೋಬೊಟ್ ಆತ್ಮಹತ್ಯೆ | ‘ಸು ಅಂದ್ರೆ ಸುಕ್ರುಂಡೆ’ ಅನ್ನುವ ನಮ್ಮ ಡೀಯರ್ ಮೀಡಿಯಾ!

ಸಂಜೆ 7ಕ್ಕೆ ಉಳ್ಳಾಲ ದರ್ಗಾ ವಠಾರದಲ್ಲಿ ಅಂತಿಮ ದರ್ಶನ

ಸದ್ಯ ಕೂರತ್ ತಂಙಳ್‌ರವರ ಜನಾಝ(ಮೃತದೇಹ) ಎಟ್ಟಿಕ್ಕುಳಂನಲ್ಲಿರುವ ಸ್ವಂತ ಮನೆಯಲ್ಲಿದ್ದು, ಸಾಯಂಕಾಲ ಏಳು ಗಂಟೆಗೆ ಉಳ್ಳಾಲ ದರ್ಗಾಕ್ಕೆ ತಲುಪಲಿದೆ. ಅಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾತ್ರಿ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೂರತ್ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ. ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಅಂತಿಮ ನಮಾಝ್ ನಡೆಯಲಿದೆ ಎಂದು ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಜಮಾಅತ್ ಅಧ್ಯಕ್ಷರಾದ ಹನೀಫ್ ಹಾಜಿ ಮಾಹಿತಿ ನೀಡಿದ್ದಾರೆ.

ಸಂತಾಪ

ಖಾಝಿ ಕೂರತ್ ತಂಙಳ್ ನಿಧನಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X