ಮಂಗಳೂರು | ಅಸಮರ್ಪಕ ರಸ್ತೆಯಿಂದಾಗಿ ಸ್ಕಿಡ್ ಆಗಿ ಬಿದ್ದ ಬೈಕ್: ಟ್ಯಾಂಕರ್ ಹರಿದು ಮಹಿಳೆ ಮೃತ್ಯು

Date:

Advertisements

ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಸಮೀಪದ ತೊಕ್ಕೊಟ್ಟುವಿನಲ್ಲಿ ಶನಿವಾರ ಸಂಜೆ 5ರ ಸುಮಾರಿಗೆ ನಡೆದಿದೆ.

ಘಟನೆಯು ತೊಕ್ಕೊಟ್ಟು – ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ಮಹಿಳೆ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ ಅಬ್ದುಲ್ ರಶೀದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಆಕ್ರೋಶಗೊಂಡು ಸೇರಿದ್ದರಿಂದ, ಟ್ರಾಫಿಕ್ ಜಾಮ್ ಉಂಟಾಯಿತು.

Advertisements

ಇದನ್ನು ಓದಿದ್ದೀರಾ? ಚೀನಾ ಕಂಪನಿಯ ಲಾಭಕ್ಕಾಗಿ ಬಿಎಸ್‌ವೈ, ಶ್ರೀರಾಮುಲು ಭ್ರಷ್ಟಾಚಾರ!

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಪೊಲೀಸರ ಪ್ರಕ್ರಿಯೆ ಮುಗಿದ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ಆಸ್ಪತ್ರೆಯ ಸಿಬ್ಬಂದಿ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

pilar

“ಮಂಗಳೂರು ನಗರದಿಂದ ದೇರಳಕಟ್ಟೆಗೆ ತೆರಳುವ ತೊಕ್ಕೊಟ್ಟು – ಚೆಂಬುಗುಡ್ಡೆಯ ರಸ್ತೆಯು ಪ್ರಮುಖ ರಸ್ತೆಯಾಗಿದ್ದು, ಪ್ರಮುಖ ಮೂರು ನಾಲ್ಕು ಆಸ್ಪತ್ರೆ, ಕಾಲೇಜು, ವಿವಿಗಳನ್ನು ಸಂಪರ್ಕಿಸುತ್ತದೆ. ಇಲ್ಲಿನ ರಸ್ತೆಯು ಸಂಪೂರ್ಣ ಹಾಳಾಗಿ, ಸುಮಾರು ವರ್ಷಗಳೇ ಕಳೆದಿದೆ. ಆದರೂ ಕೂಡ, ಉಳ್ಳಾಲದ ಶಾಸಕರಾದ ಸ್ಪೀಕರ್ ಯು ಟಿ ಖಾದರ್ ಅಗಲೀ, ಉಳ್ಳಾಲ ನಗರಸಭೆಯ ಅಧಿಕಾರಿಗಳಾಗಲೀ ಈವರೆಗೆ ಕ್ರಮ ಕೈಗೊಂಡಿಲ್ಲ. ಚೊಂಬುಗುಡ್ಡೆ ರಸ್ತೆ ಸರಿಯಾಗಲು ಇನ್ನೆಷ್ಟು ಜನರ ಪ್ರಾಣ ಹೋಗಬೇಕು” ಎಂದು ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಸ್ಥಳೀಯ ನಿವಾಸಿ ನಿಝಾಮುದ್ದೀನ್ ಆಕ್ರೋಶ ಹೊರಹಾಕಿದ್ದಾರೆ.

“ಇಂದಿನ ಘಟನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಕೂಡಲೇ ಚೊಂಬುಗುಡ್ಡೆ ರಸ್ತೆಯನ್ನು ಸರಿಪಡಿಸಲು ಶಾಸಕ ಯು ಟಿ ಖಾದರ್ ಮುತುವರ್ಜಿ ವಹಿಸಬೇಕು” ಎಂದು ಸ್ಥಳೀಯ ತರಕಾರಿ ವ್ಯಾಪಾರಿಯೋರ್ವರು ಈ ದಿನ.ಕಾಮ್ ಮೂಲಕ ಒತ್ತಾಯಿಸಿದ್ದಾರೆ.

ಮಮಮಮ
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X