ಮಂಗಳೂರು | ಪಾರ್ಟ್‌ ಟೈಮ್‌ ಕೆಲಸದ ಹೆಸರಿನಲ್ಲಿ ₹6.50 ಲಕ್ಷ ವಂಚನೆ

Date:

Advertisements

ಮನೆಯಿಂದಲೇ ಪಾರ್ಟ್‌ಟೈಮ್‌ ಕೆಲಸ ಮಾಡಿ ಹಣಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ₹6.50 ಲಕ್ಷ ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ ಜೂ. 25ರಂದು ವಾಟ್ಸ್ಆ್ಯಪ್ ಮೂಲಕ ಪಾರ್ಟ್‌ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಓಪನ್‌ ಮಾಡಿದ ಬಳಿಕ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡುವಂತೆ ಸೂಚಿಸಲಾಗಿದೆ. ಅನಂತರ ಅದರ ಜತೆ ಮತ್ತೆರಡು ಲಿಂಕ್ ಕಳುಹಿಸಿ 20 ವರ್ಕ್ ಟಾಸ್ಕ್‌ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಅದಕ್ಕೂ ಮೊದಲು ವರ್ಕಿಂಗ್ ಐಡಿ ನಂಬ‌ರ್ ಕೊಟ್ಟಿದ್ದು, ಅಕೌಂಟ್ ವಿವರಗಳನ್ನು ಪಡೆದಿದ್ದರು.

ಇದನ್ನೂ ಓದಿ: ಮಂಗಳೂರು | ʼಸಿಂಧೂರ ವಿಜಯʼ ಉದ್ಯಾನವನ ಉದ್ಘಾಟನೆ

Advertisements

ಮೊದಲ ಟಾಸ್ಕ್ ಪೂರ್ಣಗೊಳಿಸಿದ ಬಳಿಕೆ ಖಾತೆಗೆ ₹180, ಬಳಿಕ ₹200 ಪಾವತಿಯಾಗಿದೆ. ಜೂ. 26ರಂದು ಟ್ರೇಡ್ ಟಾಸ್ಕ್ ನೀಡಿದ್ದು, ಈ ಟಾಸ್ಕ್‌ಗೆ ₹800 ಪಾವತಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ದೂರುದಾರರು ಹಣ ಪಾವತಿಸಿದ್ದರು. ಬಳಿಕ ಅದೇ ರೀತಿ ಜೂ.28ರ ವರೆಗೆ ಹಂತ ಹಂತವಾಗಿ ಒಟ್ಟು ₹6,50,801 ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಹಣವನ್ನು ವಾಪಸ್ ಕೇಳಿದಾಗ ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X