ಮಂಗಳೂರು | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಮನವಿ

Date:

Advertisements

ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ ಸ್ಥಳೀಯರು ಆಯುಕ್ತರಿಗೆ ಮನವಿ ಸಲ್ಲಿಸಿದರು.

“ಗೌರಿಮಠ, ಟಿ ಟಿ ರಸ್ತೆ, ಮಾರ್ಕೆಟ್ ರಸ್ತೆ, ಶರವು ದೇವಸ್ಥಾನ ರಸ್ತೆ, ಮಹಾಮಾಯ ಟೆಂಪಲ್ ರಸ್ತೆ ಹಾಗೂ ಬಂದರು ಪ್ರದೇಶದಲ್ಲಿ ಕಳೆದ 2-3 ತಿಂಗಳಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸ್ಥಳೀಯರು ಸಮಸ್ಯೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಪಾಲಿಕೆಯು ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದೆ. ಪಾಲಿಕೆ ಸದಸ್ಯೆಯಾಗಿ ನನ್ನ ಅವಧಿ ಮುಗಿದಿರಬಹುದು, ಆದರೂ ನನ್ನ ವಾರ್ಡಿನ ಜನತೆಯ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ ಮತ್ತು ಜವಾಬ್ದಾರಿ. ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ಇನ್ನೂ ಎರಡು ತಿಂಗಳಿಗೆ ಆಗುವಷ್ಟು ನೀರು ಇದೆ ಎಂದಿದ್ದಾರೆ. ಹಾಗಾದರೆ ನೀರು ಯಾಕೆ ಬಿಡುತ್ತಿಲ್ಲ? ಸಚಿವರು ಒಮ್ಮೆ ಈ ವಾರ್ಡಿಗೆ ಬಂದು ಜನತೆಯ ಸಮಸ್ಯೆಯನ್ನು ಕಣ್ಣಾರೆ ಕಂಡು ಆಮೇಲೆ ಮಾತಾಡಬೇಕು. ಇನ್ನು ಎರಡರಿಂದ ಮೂರು ದಿನ ಕಾದು ನೋಡುತ್ತೇವೆ, ಸಮಸ್ಯೆ ಬಗೆಹರಿಯದಿದ್ದರೆ ವಾರ್ಡಿನ ಜನತೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು” ಎಂದು ಪೂರ್ಣಿಮಾ ಅವರು ಎಚ್ಚರಿಕೆ ನೀಡಿದರು.

ವಾರ್ಡ್ ನಿವಾಸಿ ರಮೇಶ್ ಮಾತನಾಡಿ, “ಸಚಿವರೇ ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಇಲ್ಲ, ಎಂದು ಹೇಳಿದ ಮೇಲೆ ಅಧಿಕಾರಿಗಳು ಯಾಕೆ ನೀರು ಬಿಡುತ್ತಿಲ್ಲ? ನಮಗೆ ಸಾಕಾಗಿ ಹೋಗಿದೆ. ಒಂದೋ ನೀರು ಕೊಡಿ, ಇಲ್ಲವೇ ವಿಷ ಕೊಡಿ. ನಿಕಟ ಪೂರ್ವ ಪಾಲಿಕೆ ಸದಸ್ಯೆ ನಮ್ಮ ಪರವಾಗಿ ಪ್ರತಿಭಟನೆ ಮಾಡುವುದಾದರೆ ನಾವು ಸಹ ಅವರ ಜೊತೆ ಕೈಜೋಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಇದನ್ನೂ ಓದಿ: ಮಂಗಳೂರು | ಏ.7: BSWT ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ

ಸ್ಥಳೀಯರಾದ ಗಣಪತಿ ಕಾಮತ್, ಮುರಳಿಧರ್ ನಾಯಕ್, ಪೂರ್ಣಿಮಾ ರಾವ್, ರವೀಂದ್ರ ಮಲ್ಯ, ಶ್ರೀಮತಿ, ಸತೀಶ್ ಮಲ್ಯ, ವಿಜಯಲಕ್ಷ್ಮಿ, ಸ್ಮಿತಾ ಶೆಣೈ, ವಿದ್ಯಾ, ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X