ಮಂಗಳೂರು | ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ; ಕೆಂಪು ಕಲ್ಲು, ಮರಳು ವಿತರಣೆಗೆ ತುರ್ತು ಕ್ರಮಕ್ಕೆ ಆಗ್ರಹ

Date:

Advertisements

ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ ತೀವ್ರತೆ ಹೆಚ್ಚಾಗಿದೆ. ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ತೊಂದರೆಯಾಗಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಕೆ.ಯಾದವ ಶೆಟ್ಟಿ ಹೇಳಿದ್ದಾರೆ

ಸೋಮವಾರ ನಗರದ ಮಿನಿ ವಿಧಾನ ಸೌಧದ ಮುಂಭಾಗ ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದ ಕಟ್ಟಡ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇದನ್ನೂ ಓದಿ: ಎಫ್‌ಎಸ್ಎಲ್ ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಶೋಧ ಕಾರ್ಯ ಸ್ಥಗಿತ: ಗೃಹ ಸಚಿವ ಡಾ. ಜಿ ಪರಮೇಶ್ವರ್

Advertisements

ಜಿಲ್ಲಾಡಳಿತದ ನೀತಿಯಿಂದ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬ ಈಗ ಸಂಪೂರ್ಣವಾಗಿ ಬೀದಿ ಪಾಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಅಕ್ರಮ ದಂಧೆ ತಡೆಯುವ ಕ್ರಮವು ಸ್ವಾಗತಾರ್ಹವಾಗಿದ್ದರೂ ಅದರಿಂದ ಸೃಷ್ಟಿಯಾಗಿರುವಂತಹ ಇತರೆ ಸಮಸ್ಯೆಗಳಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ಇಲ್ಲದಿರುವುದು ಖಂಡನೀಯ ಎಂದರು.

ಕಟ್ಟಡ ಕಾರ್ಮಿಕರ ರಂಗದ ಕೆಂಪು ಕಲ್ಲಿನ ಕೋರೆ ಪರವಾನಿಗೆ ಪದ್ಧತಿಯಲ್ಲಿ ಸರಳೀಕರಣ ಮತ್ತು ನ್ಯಾಯಯುತವಾಗಿರಲಿ. ಕೇರಳದ ಮಾದರಿಯಲ್ಲಿ ರಾಜಧನ ಪದ್ಧತಿ ಜಿಲ್ಲೆಯಲ್ಲಿ ಜಾರಿಯಾಗಲಿ, ಕರಾವಳಿಗೆ ಮರಳು ನೀತಿ ಜಾರಿಯಾಗಲು ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ಖಜಾಂಚಿ ಯೋಗೀಶ್ ಜಪ್ಪಿನಮೊಗರು, ಮುಂದಾಳುಗಳಾದ ಜನಾರ್ದನ ಕುತ್ತಾರ್, ಶಂಕರ ಮೂಡಬಿದರೆ, ಚಂದ್ರಹಾಸ ಪಿಲಾರ್, ವಿಶ್ವನಾಥ ಸುಳ್ಯ, ನೋಣಯ್ಯ ಗೌಡ ಕೈಕಂಭ, ರಾಮಚಂದ್ರ ಪಜೀರು, ಕಟ್ಟಡ ಮತ್ತು ಕೋರೆ ಕಾರ್ಮಿಕರ ಸಂಘ ಎಐಟಿಯುಸಿ ಮುಂದಾಳುಗಳಾದ ಎಚ್.ವಿ.ರಾವ್, ಕರುಣಾಕರ ಮಾರಿಪಳ್ಳ, ಶೇಖರ್ ಬಿ, ಸುರೇಶ್ ಬಿ, ವಿ.ಕುಕ್ಯಾನ್ ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X