ಮಂಗಳೂರು | ದೋಷಯುಕ್ತ ಸ್ಕೂಟರ್ ಮಾರಾಟ; ಓಲಾ ಕಂಪೆನಿಗೆ ಭಾರೀ ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

Date:

Advertisements

ಮಂಗಳೂರಿನ ಸರ್ಕಾರಿ ಕಂಪೆನಿಯೊಂದರ ಉದ್ಯೋಗಿ ಖರೀದಿಸಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ನಿರಂತರ ದೋಷ ತೋರಿದ ಹಿನ್ನೆಲೆಯಲ್ಲಿ, ಗ್ರಾಹಕರ ನ್ಯಾಯಾಲಯ ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರೀ ದಂಡ ವಿಧಿಸಿದೆ.

ಸರ್ಕಾರಿ ಉದ್ಯೋಗಿ ಉದಯ್ ಕುಮಾರ್ ಬಿ ಸಿ ಅವರು 1.17 ಲಕ್ಷ ರೂ ಪಾವತಿಸಿ ಓಲಾ ಸ್ಕೂಟರ್ ಖರೀದಿಸಿದ್ದರು. ಆದರೆ, ಖರೀದಿಸಿದ ಕೆಲವೇ ದಿನಗಳಲ್ಲಿ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತನೆ ನಿಲ್ಲುತ್ತಿತ್ತು. ಮೊದಲ ಬಾರಿಗೆ ದೂರು ದಾಖಲಿಸಿದಾಗ ಕಂಪೆನಿಯೇ ರಿಪೇರಿ ಮಾಡಿದರೂ, ಸಮಸ್ಯೆ ಮರುಕಳಿಸುತ್ತಲೇ ಇತ್ತು. ರಿಪೇರಿ ನೆಪದಲ್ಲಿ ಕಂಪೆನಿಯೇ ವಾಹನವನ್ನು ತನ್ನ ಬಳಿಯಲ್ಲಿಟ್ಟುಕೊಂಡರೂ ಶಾಶ್ವತ ಪರಿಹಾರ ನೀಡಲು ವಿಫಲವಾಯಿತು.

ಇದರಿಂದ ಬೇಸತ್ತ ಗ್ರಾಹಕರು ಕಾನೂನು ನೋಟಿಸ್‌ ನೀಡಿ ಬಳಿಕ ಗ್ರಾಹಕರ ಪರಿಹಾರ ಆಯೋಗವನ್ನು ಸಂಪರ್ಕಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಓಲಾ ಕಂಪೆನಿ ಸೇವಾನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನ ಮಾರಾಟ ಮಾಡಿದೆ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

ಕಂಪೆನಿಯು 45 ದಿನಗಳಲ್ಲಿ ಸ್ಕೂಟರ್‌ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಬೇಕು ಅದು ಸಾಧ್ಯವಾಗದಿದ್ದರೆ, 45 ದಿನಗಳಲ್ಲಿ ಶೇಕಡಾ 6ರಷ್ಟು ಬಡ್ಡಿಯೊಂದಿಗೆ 1.17 ಲಕ್ಷ ರೂ.ಗಳನ್ನು ಗ್ರಾಹಕರಿಗೆ ಮರುಪಾವತಿಸಬೇಕು. ಜೊತೆಗೆ, ಸೇವಾನ್ಯೂನ್ಯತೆಗೆ 10,000 ರೂ. ದಂಡ ಹಾಗೂ ಪ್ರಕರಣದ ವೆಚ್ಚವಾಗಿ 5,000 ರೂಗಳನ್ನು ಪಾವತಿಸಬೇಕು ಎಂದು ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X