ಮಂಗಳೂರು | ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿ: ಕಮಿಷನರ್ ಅಗರ್ವಾಲ್

Date:

Advertisements

ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ಈ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನೂ ಕೂಡ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಶನಿವಾರ (ಮೇ 03) ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಗೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಗುರುತಿಸಿದ್ದೇವೆ. 8 ಮಂದಿಯನ್ನು ಬಂಧಿಸಿದ್ದೇವೆ. ಅಬ್ದುಲ್ ಸಫ್ವಾನ್, ನಿಯಾಜ್ ಶಾಂತಿಗುಡ್ಡೆ, ಬಜ್ಪೆ, ಮೊಹಮ್ಮದ್ ಮುಝಮಿಲ್, ಕಲಂದರ್ ಶಾಫಿ, ರಂಜಿತ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಜೋಕಟ್ಟೆ, ಆದಿಲ್ ಮೆಹರೂಫ್ ಎಂಬವರನ್ನು ಬಂಧಿಸಲಾಗಿದೆ. ಇದರಲ್ಲಿ ಆದಿಲ್ ಮೆಹರೂಫ್ ಅವರು 2022ರಲ್ಲಿ ಸುರತ್ಕಲ್‌ನಲ್ಲಿ ಕೊಲೆಯಾದ ಫಾಝಿಲ್ ಅವರ ಸಹೋದರ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

WhatsApp Image 2025 05 03 at 2.15.43 PM

“ಆರೋಪಿ ಸಫ್ವಾನ್‌ಗೆ ಸುಹಾಸ್ ಶೆಟ್ಟಿ ತನ್ನನ್ನು ಕೊಲೆ ಮಾಡಬಹುದು ಎಂಬ ಭಯ ಇತ್ತು. ಅಬ್ದುಲ್ ಸಫ್ವಾನ್ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ. 2023ರಲ್ಲಿ ತಂಡವೊಂದು ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಸುಹಾಸ್ ಶೆಟ್ಟಿ ತಂಡದಿಂದ ಹತ್ಯೆಯಾಗುವ ಆತಂಕ ಇದ್ದಿದ್ದರಿಂದ ಸುಹಾಸ್ ಶೆಟ್ಟಿಯ ಹತ್ಯೆಗೆ ಸಫ್ವಾನ್​​ ತೀರ್ಮಾನಿಸಿದ್ದ. ಈ ಹಿನ್ನೆಲೆಯಲ್ಲಿ ಸಫ್ವಾನ್ 2022 ರಲ್ಲಿ ಕೊಲೆಯಾದ ಫಾಝಿಲ್‌ ಸಹೋದರ ಆದಿಲ್‌ನನ್ನು ಸಂಪರ್ಕಿಸಿದ್ದಾನೆ. ಸುಹಾಸ್ ಹತ್ಯೆಗೆ ಆದಿಲ್ 5 ಲಕ್ಷ ರೂ. ಕೊಡುವ ಭರವಸೆ ನೀಡಿ, 3 ಲಕ್ಷ ರೂ. ಮುಂಗಡ ಪಾವತಿಸಿದ್ದ. ಇದು ಮಿಕ್ಸ್ ಕೇಸ್, ಕೇವಲ ಪ್ರತೀಕಾರದ ಕೊಲೆ ಎಂದು ಹೇಳಲು ಆಗುವುದಿಲ್ಲ” ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Advertisements
fazil bro
2022ರಲ್ಲಿ ಕೊಲೆಗೀಡಾಗಿದ್ದ ಫಾಝಿಲ್ ಹಾಗೂ ಸದ್ಯ ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಬಂಧಿತನಾಗಿರುವ ಫಾಝಿಲ್ ಸಹೋದರ ಆದಿಲ್ ಮೆಹರೂಫ್

ನಿಯಾಝ್‌ ಎಂಬಾತ ತನ್ನ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್‌ ಎಂಬವರನ್ನು ಸಂಪರ್ಕ ಮಾಡಿದ್ದಾನೆ. ಆರೋಪಿಗಳು ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಹತ್ಯೆ ನಡೆಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಪ್ರಕರಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸ್ಪೀಕರ್ ಯು ಟಿ ಖಾದರ್ ರಾಜೀನಾಮೆ ನೀಡಬೇಕು: ಬಿಜೆಪಿ ಶಾಸಕ ಭರತ್ ಶೆಟ್ಟಿ

ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಸ್ಪೀಕರ್ ಯು ಟಿ ಖಾದರ್ ಕ್ಲೀನ್ ಚಿಟ್ ನೀಡಿದ್ದರು. ಹಾಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧ ಪಟ್ಟಂತೆ ಮಾತನಾಡಿದ್ದ ಸಭಾಪತಿ ಯು. ಟಿ ಖಾದರ್ ಅವರು `ಈ ಹಿಂದೆ ನಡೆದ ಫಾಝಿಲ್ ಕೊಲೆಗೂ – ಸುಹಾಸ್ ಶೆಟ್ಟಿ ಕೊಲೆಗೂ ಯಾವುದೇ ರೀತಿಯ ಸಂಬಂಧ ಇಲ್ಲ, ನನಗೆ ಫಾಝಿಲ್ ಮನೆಯವರು ಕರೆ ಮಾಡಿ ಹೇಳಿದ್ದಾರೆ´ ಎಂದಿದ್ದರು. ಆದರೆ ಈಗ ಸುಹಾಸ್ ಹತ್ಯೆಯ ಹಿಂದೆ ಫಾಝಿಲ್ ನ ಸಹೋದರ ಅದಿಲ್ ಮೆಹರೂಪ್ ನೇರ ಭಾಗಿಯಾಗಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ಹಾಗಾಗಿ, ಸ್ಪೀಕರ್ ಯು ಟಿ ಖಾದರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಫಾಝಿಲ್ ಯಾರು?

ಸುರತ್ಕಲ್‌ನಲ್ಲಿ 2022ರ ಜುಲೈ 26ರಂದು ನಡೆದ ಮೊಹಮ್ಮದ್‌ ಫಾಝಿಲ್‌ ಕೊಲೆ ಎಂಬ ಅಮಾಯಕ ಯುವಕ ಕೊಲೆಗೀಡಾಗಿದ್ದ. ನೆಟ್ಟಾರು ಪ್ರವೀಣ್‌ ಕೊಲೆಗೆ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬಾತನ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದಲ್ಲಿ ಸುಹಾಸ್‌ ಶೆಟ್ಟಿ ಪ್ರಕರಣದ ಎ1 ಆರೋಪಿಯಾಗಿ ಜೈಲು ಸೇರಿದ್ದ. ಕಳೆದ ಮಾರ್ಚ್ ನಲ್ಲಿ ಹೈಕೋರ್ಟ್‌ ನಿಂದ ಜಾಮೀನು ಪಡೆದು ಸುಹಾಸ್ ಶೆಟ್ಟಿ ಹೊರ ಬಂದಿದ್ದ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X