ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಸ್ಪೀಕರ್ ಯು ಟಿ ಖಾದರ್ ಆಪ್ತನೊಬ್ಬ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಪ್ರಸಂಗ ನಡೆಯಿತು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆಯುತ್ತಿದ್ದ ಪತ್ರಿಕಾಗೋಷ್ಠಿ ವೇಳೆ ಈ ಬೆಳವಣಿಗೆ ನಡೆದಿದೆ. ಸಚಿವರ ಹಿಂದೆಯೇ ನಿಂತಿದ್ದ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, ಸಚಿವರು ಪ್ರಚೋದನಕಾರಿ ಭಾಷಣಗಳಿಗೆ ಬ್ರೇಕ್ ಹಾಕುವ ಬಗ್ಗೆ ಮಾತಾಡುತ್ತಿದ್ದ ವೇಳೆ ಕಾಂಗ್ರೆಸ್ ಮುಸ್ಲಿಂ ಮುಖಂಡ, ಸಚಿವರ ವಿರುದ್ಧ ಸಿಡಿದೆದ್ದಿದ್ದಾರೆ.

ಸಚಿವರು ಮಾತಾಡುತ್ತಿದ್ದ ವೇಳೆ ಮುಸ್ಲಿಂ ಮುಖಂಡ ಮಧ್ಯೆ ಪ್ರವೇಶ ಮಾಡಿ, “ಮೊನ್ನೆ ನಡೆದ ಅಬ್ದುಲ್ ರಹ್ಮಾನ್ ಕೊಲೆ ಕೂಡ ಪ್ರಚೋದನಕಾರಿ ಭಾಷಣದಿಂದಲೇ ಆಗಿದೆ ಎಂದು ಹೇಳಿದ್ದಾರೆ. ಮಾತಿನ ಮಧ್ಯೆ ಬಂದ ಮುಸ್ಲಿಂ ಮುಖಂಡನ ವಿರುದ್ಧ ದಿನೇಶ್​ ಗುಂಡೂರಾವ್​ ಕೋಪಗೊಂಡು, “ಇದು ಪತ್ರಿಕಾಗೋಷ್ಠಿ, ಸುಮ್ನಿರಿ’ ಎಂದು ತಿಳಿಸಿದರು.

Advertisements

ಮತ್ತೊಮ್ಮೆ ಅಡಚಣೆಯಿಂದ ಸಿಡಿಮಿಡಿಗೊಂಡ ಸಚಿವರು, ತಾಳ್ಮೆ ಕಳೆದುಕೊಂಡ ದಿನೇಶ್ ಗುಂಡೂರಾವ್ ಯುವಕನನ್ನು ಅಲ್ಲಿಂದ ಹೊರಗೆ ಹಾಕಿ ಎಂದು ಹೇಳುತ್ತಾರೆ. ಅವರ ಪಕ್ಕದಲ್ಲಿ ಕುಳಿತಿದ್ದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಯುವಕನಿಗೆ ಸಮಾಧಾನ ಹೇಳುತ್ತಿರುವುದು ಕಂಡು ಬಂತು.

ಇದನ್ನು ಓದಿದ್ದೀರಾ? ಮಂಗಳೂರು | ತನ್ನ ವರ್ಗಾವಣೆ ಆದೇಶಕ್ಕೂ ಮುನ್ನ ಏಳು ಪೊಲೀಸರನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಿದ್ದ ಕಮಿಷನರ್ ಅಗರ್ವಾಲ್!

ಹೊರಗಡೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು, “ಕೋಮು ಪ್ರಚೋದನೆಯಿಂದಲೇ ಅಮಾಯಕರ ಹತ್ಯೆಗಳು ಆಗಿವೆ,. ಯಾರೇ ಆಗಲಿ ಕ್ರಮ ಕೈಗೊಳ್ಳಿ. ಈ ವಿಚಾರದಲ್ಲಿ ಸರ್ಕಾರದ ಮೃದು ಧೋರಣೆ ಯಾಕೆ” ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಪಕ್ಷಕ್ಕೆ ರಾಜೀನಾಮೆ ಕೊಡುವವರ ಬಗ್ಗೆ ನಾನು ಮಾತಾಡಲ್ಲ: ಗುಂಡೂರಾವ್

ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಕಾಂಗ್ರೆಸ್ ಮುಸ್ಲಿಂ ಮುಖಂಡರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ದಿನೇಶ್ ಗುಂಡೂರಾವ್​, “ನನ್ನ ಬಳಿ ಯಾವ ರಾಜೀನಾಮೆಯ ವಿಚಾರವೂ ಬರಲಿಲ್ಲ. ಪಕ್ಷಕ್ಕೆ ರಾಜೀನಾಮೆ ಕೊಡೋದು, ಬಿಡುವುದರ ಬಗ್ಗೆ ನಾನು ಮಾತನಾಡಲ್ಲ” ಎಂದಿದ್ದಾರೆ.

“ನಾನು ಸರಕಾರದ ಪ್ರತಿನಿಧಿಯಾಗಿ ಇಲ್ಲಿ ಬಂದಿದ್ದೇನೆ. ರಾಜೀನಾಮೆ ವಿಚಾರ ನನಗೆ ನೇರವಾಗಿ ಬರುವುದಿಲ್ಲ. ಸರಕಾರ ಎಂದ ಮೇಲೆ ನಮಗೆ ಎಲ್ಲ ಧರ್ಮ, ಪಕ್ಷ ಸಂಘಟನೆಯವರೂ ಒಂದೇ. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ನನ್ನ ಜವಾಬ್ದಾರಿ. ದ್ವೇಷ ಹರಡುವವರಿಗೆ ಸುಲಭವಾಗಿ ಬೇಲ್ ಸಿಗದಂತಹ ಕಾನೂನು ತರುತ್ತೇವೆ. ಗಲಭೆ, ಹತ್ಯೆಗಳನ್ನ ನಿಲ್ಲಿಸುವುದು ನನ್ನ ಮುಖ್ಯ ಕೆಲಸ. ಘಟನೆ ನಡೆದಾಗ ನಾವು ಯಾವಾಗ ಬರಬೇಕು ಬರಬಾರದು ಅನ್ನುವುದನ್ನು ಸಮಯ ನೋಡಿ ತೀರ್ಮಾನ ಮಾಡುತ್ತೇವೆ. ಜನರ ಆಕ್ರೋಶವನ್ನು ಕೆಲವರು ರಾಜಕೀಯ ಬಂಡವಾಳ ಮಾಡುತ್ತಿದ್ದಾರೆ” ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X