ಮಂಗಳೂರು | ಜಿಲ್ಲೆಯಲ್ಲಿ ಕೆಲವರಿಂದ ಮಾತ್ರ ಶಾಂತಿ, ಸೌಹಾರ್ದತೆಗೆ ಧಕ್ಕೆ: ಜಯಕೃಷ್ಣ ಶೆಟ್ಟಿ

Date:

Advertisements

ಮಂಗಳೂರು ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪ್ರತಿ ತಾಲೂಕಿನಿಂದ 8 ರಿಂದ 10 ಮಂದಿ ಸದಸ್ಯರು ಒಳಗೊಂಡ ಸಮಿತಿಯನ್ನು ರಚಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲಾಗುವುದು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಹೇಳಿದರು.

ಸೋಮವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಹಿಂದೆ ಸ್ಪೆಷಲ್ ಆಕ್ಷನ್ ಫೋರ್ಸ್‌ ಸ್ಥಾಪನೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದರು.

2001ರ ನಂತರ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಕೈಗಾರಿಕೋದ್ಯಮಕ್ಕೆ ಒತ್ತು ನೀಡುತ್ತಾ ಬಂದಿರುವ ಸಮಿತಿಯು ಜಿಲ್ಲೆಯ ಅನೇಕರಿಗೆ ಉದ್ಯೋಗವಕಾಶ ದೊರಕುವಂತೆ ಶ್ರಮಿಸಿದೆ. ಇದೀಗ ಅವಿಭಜಿತ ಜಿಲ್ಲೆಯ ಅಭಿವೃದ್ಧಿಗೆ ಕಾರಣವಾಗಿರುವ ಹಿನ್ನಡೆಯನ್ನು ತೊಡೆದು ಹಾಕಿ ಹೂಡಿಕೆಗೆ ಉತ್ತೇಜನ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಸಮಿತಿಯು ಶ್ರಮಿಸಲಿದ್ದು, ಪ್ರತೀ ತಾಲೂಕಿನಿಂದ ಸಮಾನ ಮನಸ್ಕರ 8 ರಿಂದ 10 ಮಂದಿ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿ ಶಾಂತಿಗೆ ಭಂಗ ಉಂಟು ಮಾಡುವವರ ವಿರುದ್ಧ ನಿಗಾ ಇಡುವ ಜತೆಗೆ ಶಾಂತಿ ಸ್ಥಾಪನೆಗೆ ಪೂರಕವಾದ ಜಾಗೃತಿ ಮೂಡಿಸುವಲ್ಲಿ ಶ್ರಮಿಸಲಿದೆ ಎಂದು ತಿಳಿಸಿದರು.

Advertisements
WhatsApp Image 2025 06 16 at 7.05.23 PM 1

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

ಜಿಲ್ಲೆಯಲ್ಲಿ ಕೇವಲ 20 ರಿಂದ 25ರಷ್ಟು ಜನರು ಸೌಹಾರ್ದಕ್ಕೆ ಭಂಗ ಉಂಟು ಮಾಡುತ್ತಿದ್ದಾರೆ. ಇದರಿಂದ ಉಂಟಾಗುವ ಅಹಿತಕರ ಘಟನೆಗಳನ್ನು ನಿಯಂತ್ರಿಸಲು ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಬೇಕಾಗುತ್ತದೆ. ಜಿಲ್ಲೆಯ ಜನರು ಧರ್ಮ ಭೇದವಿಲ್ಲದೆ ಅನ್ಯೋನ್ಯತೆಯಿಂದ ಬಾಳಿದವರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಭಾಷಣಗಳ ಮೂಲಕ ಜಿಲ್ಲೆಯಲ್ಲಿ ದ್ವೇಷ ಅಸೂಯೆ ಹರಡುವಂತೆ ಆಗಿದೆ. ಅದರೆ ನಮ್ಮ ಸಮಿತಿಯು ಕರಾವಳಿಯಲ್ಲಿ ಶಾಂತಿ ಸ್ಥಾಪಿಸಲು ಶ್ರಮಿಸುತ್ತದೆ ಎಂದು ಸಮಿತಿಯ ರಾಜ್ಯ ಸಂಯೋಜಕ ಕೆ.ಪಿ.ಜಗದೀಶ್ ಅಧಿಕಾರಿ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X