ಮಂಗಳೂರು | ಹಿಮೋಫಿಲಿಯಾ ಬಾಧಿತ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆ

Date:

Advertisements

ಅಪರೂಪದ ಹಾಗೂ ಮಾರಣಾಂತಿಕ ರೋಗ ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ದಾಖಲೆ ನಿರ್ಮಿಸಿದೆ.

ಹುಟ್ಟಿನಿಂದ ಹಿಮೋಫಿಲಿಯಾ ಎಂಬ ರಕ್ತಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗರ್ಭಾವಸ್ಥೆಯಲ್ಲಿ ಹಿಮೋಫಿಲಿಯಾ ಇದ್ದಲ್ಲಿ ಯಾವುದೇ ಸಮಯದಲ್ಲಿ ರಕ್ತಸ್ರಾವ ಆಗಿ ತಾಯಿ ಮರಣ ಆಗುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಫ್ಯಾಕ್ಟರ್ 8ರ ಕೊರತೆ ಈ ರೋಗದ ಮೂಲ ಅಂಶ. ಒಂದು ಲಕ್ಷಕ್ಕೆ ಒಂದರಂತೆ ಇರುವ ಅಪರೂಪದ ಈ ಕಾಯಿಲೆಗೆ ಚಿಕಿತ್ಸೆ ಅಷ್ಟು ಸುಲಭವಿರಲಿಲ್ಲ.

ವೆನ್ಲಾಕ್ ಬ್ಲಡ್ ಬ್ಯಾಂಕ್‌ನ ಡಾ. ಶರತ್ ಅವರನ್ನು ಭೇಟಿಯಾದ ಸಂಬಂಧಿಕರು, ಫ್ಯಾಕ್ಟರ್ 8 ಇಂಜೆಕ್ಷನ್‌ಗಳ ಪೂರೈಕೆಯ ಬಗ್ಗೆ ತಿಳಿದುಕೊಳ್ಳುತ್ತಾರೆ. ಅದೇ ಆಸ್ಪತ್ರೆಯಲ್ಲಿ ನಿಯಮಿತವಾಗಿ ಗರ್ಭಿಣಿ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರದ ವತಿಯಿಂದ ಈ ಮಹಿಳೆಗೆ ವಾರಕ್ಕೆ ಒಂದಾವರ್ತಿ ಅಗತ್ಯತೆಯ ಈ ಇಂಜೆಕ್ಷನ್ ನೀಡುವ ವ್ಯವಸ್ಥೆಯನ್ನು ಗರ್ಭಾವಸ್ಥೆಯ ಪೂರ್ಣ ಅವಧಿಯವರೆಗೂ ಆಸ್ಪತ್ರೆ ನಿರ್ವಹಿಸುತ್ತದೆ. ನಿರೀಕ್ಷಿತ ಹೆರಿಗೆ ದಿನಾಂಕಕ್ಕೆ 20 ದಿನಗಳ ಮುಂಚಿತವಾಗಿ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಬಳಿಕ ಸುರಕ್ಷಿತವಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಲಾಗಿದೆ.

Advertisements

ಲಕ್ಷಾಂತರ ರೂಪಾಯಿ ಬೆಲೆಯುಳ್ಳ 25,000 ಯೂನಿಟ್‌ನ ಅಪರೂಪದ ಈ ಇಂಜೆಕ್ಷನ್ ನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.
ಕೆಎಂಸಿಯ ತಜ್ಞ ವೈದ್ಯರುಗಳು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಅನುಪಮಾ ರಾವ್, ಡಾ. ಸಿರಿಗಣೇಶ್, ಡಾ. ನಮಿತಾ, ಅರವಳಿಕೆ ತಜ್ಞರುಗಳಾದ ಡಾ. ಸುಮೇಶ್ ರಾವ್, ಡಾ. ರಂಜನ್ ಹಾಗೂ ಲೇಡಿಗೋಷನ್‌ನ ಶುಶ್ರೂಷಕ ವೃಂದದ ಸೇವೆ ನೆರವೇರಿಸಿದೆ.

ಇದನ್ನೂ ಓದಿ: ಮಂಗಳೂರು | ಮೇ 10ರಂದು ಪತ್ರಕರ್ತ ಬಿ.ಎಂ.ಬಶೀರ್ ಅವರ ‘ಅಗ್ನಿಪಥ’ ಕಾದಂಬರಿ ಬಿಡುಗಡೆ

ಪ್ರಸವೋತ್ತರವಾಗಿ ಸುಮಾರು ಹತ್ತು ದಿನಗಳ ಆಸ್ಪತ್ರೆ ಆರೈಕೆಯ ಬಳಿಕ ಸುರಕ್ಷಿತವಾಗಿ ಮನೆ ಸೇರಿರುವ ಮಹಿಳೆ ಲೇಡಿಗೋಷನ್ ಆಸ್ಪತ್ರೆ ಮತ್ತು ಉತ್ಕೃಷ್ಟ ಸರಕಾರಿ ವ್ಯವಸ್ಥೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X