ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

Date:

Advertisements

ಮಂಗಳೂರಿನ ಹಳೆ ಬಂದರು ಸಗಟು ಮಾರುಕಟ್ಟೆಯ ಪಂಚಮಹಲ್ ವಾಸುದೇವ ಕಾಮತ್ ಎಂಬ ಕಂಪೆನಿಯಲ್ಲಿ ದುಡಿಯುತ್ತಿರುವ ಆರು ಮಂದಿ ಹಮಾಲಿ ಕಾರ್ಮಿಕರನ್ನು ಸಕಾರಣ ಇಲ್ಲದೆ ಕೆಲಸ ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಉತ್ತರ ಭಾರತೀಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸುವ ಉದ್ದೇಶದಿಂದ 40 ವರ್ಷಗಳಿಂದ ಕೆಲಸ ಮಾಡಿದ ಸ್ಥಳೀಯ ಕಾರ್ಮಿಕರಿಗೆ ಕನಿಷ್ಠ ಸೇವಾ ಪರಿಹಾರ ನೀಡದೆ ಅನ್ಯಾಯ ಮಾಡಲಾಗಿದೆ. ಕಾರ್ಮಿಕರಿಗಾಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಕಾರ್ಮಿಕರಿಗೆ ನ್ಯಾಯ ಸಿಗದೇ ಹೋದಲ್ಲಿ ಸಗಟು ಮಾರುಕಟ್ಟೆಯ ಎಲ್ಲಾ ಹಮಾಲಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಅನನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಕೆ ಇಮ್ತಿಯಾಜ್, ಸಂಘದ ಪ್ರಧಾನ ಕಾರ್ಯದರ್ಶಿ ಫಾರೂಕ್ ಉಳ್ಳಾಲಬೈಲ್, ಕೋಶಾಧಿಕಾರಿ ಶಮೀರ್ ಬೋಳಿಯಾರ್, ಮುಖಂಡರಾದ ಲೋಕೇಶ್ ಶೆಟ್ಟಿ, ಮಜೀದ್ ಉಳ್ಳಾಲ, ಹರೀಶ್ ಕೆರೆಬೈಲ್, ಮೋಹನ ಕುಂಪಲ, ಪಿ.ಟಿ ಮೊಹಮ್ಮದ್, ಸಿದ್ದಿಕ್ ಬೆಂಗರೆ, ಬಷೀರ್ ಹರೇಕಲ, ಪ್ರಭಾಕರ, ಅನಿಲ್, ಶರಣಪ್ಪ, ಹಂಝ, ಮಾಧವ ಕಾವೂರು ಮುಂತಾದವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X