ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್‌ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ

Date:

Advertisements

ಮಂಗಳೂರು ನಗರದ ಜೆರೋಸಾ ಶಾಲೆಯ ವಿವಾದ ದಿನದಿಂದ ವಿಕೋಪಕ್ಕೆ ಹೋಗುತ್ತಿದ್ದು, ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಮಂಗಳೂರಿನಲ್ಲಿ ದಿಡೀರ್ ರಸ್ತೆ ತಡೆ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

ಕೂಡಲೇ ಜಾಗೃತರಾದ ಪೊಲೀಸರು ಹಲವು ಮಂದಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

bjp 27

ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ, ಭರತ್ ಶೆ್ಟ್ಟಿ, ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಪಾಲಿಕೆಯ ಸದಸ್ಯರುಗಳ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

Advertisements

ಜಿಲ್ಲಾಡಳಿತ ಮತ್ತು ಮಂಗಳೂರು ಪೊಲೀಸರ ಕ್ರಮ ಖಂಡಿಸಿ ಇಂದು ನಗರದಲ್ಲಿ ವಿಹೆಚ್‌ಪಿ ಹರತಾಳಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕ್ಲಾಕ್ ಟವರ್ ಬಳಿ ನೂರಾರು ಬಜರಂಗದಳ ಮತ್ತು ವಿಹೆಚ್‌ಪಿ ಕಾರ್ಯಕರ್ತರು ಸೇರಿದ್ದರು.

bjp 3 1

ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿದ್ದರು. ಆದರೆ, ಕಾರ್ಯಕರ್ತರು ದಿಡೀರ್ ಆಗಿ ರಸ್ತೆ ತಡೆಗೆ ಮುಂದಾದರು, ಇದಕ್ಕೆ ಪೊಲೀಸರು ಅವಕಾಶ ನೀಡದ ಕಾರಣ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಜಟಾಪಟಿ ನಡೆಯಿತು. ಜೈ ಶ್ರೀ ರಾಮ್ ಘೋಷಣೆಯೊಂದಿಗೆ ಕಾರ್ಯಕರ್ತರು ಮುನ್ನುಗ್ಗಲು ಯತ್ನಿಸಿದಾಗ ಸಂಘಪರಿವಾರದ ಕಾರ್ಯಕರ್ತರನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X