ಮಂಗಳೂರು | ಯಾರೇ ಆದರೂ ಪ್ರಚೋದನೆ ಮಾಡಿದಲ್ಲಿ ಕ್ರಮ ಕೈಗೊಳ್ಳಿ: ಮುಸ್ಲಿಂ ಮುಖಂಡರಿಂದ ಸಚಿವರಿಗೆ ಮನವಿ

Date:

Advertisements

“ಮಂಗಳೂರು ಆಸುಪಾಸು ನಡೆದ ಎರಡು ಕೊಲೆಗಳಿಗೆ ಪ್ರಚೋದನೆಯೇ ಕಾರಣ. ಹಾಗಾಗಿ, ಹಿಂದು -ಮುಸ್ಲಿಂ ಯಾರೇ ಆದರೂ ಪ್ರಚೋದನೆ ಮಾಡಿದರೆ ಕ್ರಮ ಕೈಗೊಳ್ಳಿ. ಅದರಲ್ಲಿ ಮುಲಾಜಿಯೇ ಬೇಡ” ಎಂದು ಮಂಗಳೂರಿನ ಮುಸ್ಲಿಂ ಮುಖಂಡರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉಸ್ತುವಾರಿ ಸಚಿವರ ಸಭೆಗೂ ಮುನ್ನ ಮುಸ್ಲಿಂ ಮುಖಂಡರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ ಬಾವಾ, “ಸುಮಾರು 38 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿ ಬಂದಿದ್ದೇನೆ. ಆ ಸಮಯದಲ್ಲಿ ಇಂತಹ ಬೆಳವಣಿಗೆ ನೋಡಿರಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಅದು ಸಾಮರಸ್ಯದ ಜಿಲ್ಲೆ. ನಾವೆಲ್ಲ ಬಾಲ್ಯವನ್ನು ಹಿಂದೂ-ಮುಸ್ಲಿಂ ಎಂದು ನೋಡದೆ ಕಳೆದಿದ್ದೇವೆ. ನಾನು ಹಿಂದೂಗಳ ಮನೆಯಲ್ಲಿ ವಾಸವಿದ್ದುಕೊಂಡು ವಿದ್ಯಾಭ್ಯಾಸ ಪಡೆದವನು. ಅಂತಹ ಸೌಹಾರ್ದತೆಯ ವಾತಾವರಣ ನಮ್ಮ ಜಿಲ್ಲೆಯಲ್ಲಿತ್ತು. ಆದರೆ, ಇವತ್ತು ಸ್ವಾಥ ರಾಜಕಾರಣಕ್ಕಾಗಿ ನಮ್ಮ ಜಿಲ್ಲೆಯ ಸೌಹಾರ್ದತೆಯ ವಾತಾವರಣವನ್ನು ಕೆಡಿಸಲಾಗುತ್ತಿದ್ದು, ಜನರು ನೆಮ್ಮದಿಯಿಂದ ಬದುಕುವುದು ಕೂಡ ಕಷ್ಟ ಆಗಿದೆ” ಎಂದು ಬೇಸರಿಸಿದರು.

Advertisements
WhatsApp Image 2025 05 31 at 1.31.04 PM

“ಮಂಗಳೂರಿನ ಎರಡು ಕೊಲೆಗಳಿಗೆ ಪ್ರಚೋದನೆಯೇ ಕಾರಣ. ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಸಚಿವರಲ್ಲಿ ಒತ್ತಾಯಿಸಿದ್ದೇವೆ. ಮಂಗಳೂರಿನ ಜನರು ಸಾಮರಸ್ಯದಿಂದ ಬದುಕಬೇಕು. ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕಟ್ಟಿಕೊಡಬೇಕಿದೆ. ಇಲ್ಲಿನ ಪೊಲೀಸ್ ಇಲಾಖೆ ಯಾವುದೇ ಪಕ್ಷಪಾತವಿಲ್ಲದೆ, ಯಾವುದೇ ಮುಲಾಜಿಗೆ ಒಳಪಡದೆ ಕಠಿಣ ಕ್ರಮಗಳನ್ನು ಕೈಗೊಂಡರೆ ಇಲ್ಲಿನ ಪರಿಸ್ಥಿತಿ ತಕ್ಷಣವೇ ನಿಯಂತ್ರಣಕ್ಕೆ ಬರುತ್ತದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

ಬಳಿಕ ಮಾತನಾಡಿದ ಹಿರಿಯ ಮುಖಂಡ ಇಬ್ರಾಹೀಂ ಕೋಡಿಜಾಲ್, “ಜಿಲ್ಲೆಯ ವಾತಾವರಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಕೊನೆಗೂ ಕಮಿಷನರ್ ಹಾಗೂ ಎಸ್‌ಪಿಯವರನ್ನು ವರ್ಗಾವಣೆಗೊಳಿಸಿ, ಬೇರೆಯವರನ್ನು ನೇಮಕ ಮಾಡಿದೆ. ಇದು ಒಳ್ಳೆಯ ವಿಚಾರವಾದರೂ, ಅಧಿಕಾರಿಗಳ ಬದಲಾವಣೆಯಾದರೆ ಮಾತ್ರ ಎಲ್ಲವೂ ಸರಿಯಾಗುತ್ತದೆ ಎಂಬ ವಿಶ್ವಾಸ ನಮಗಿಲ್ಲ. ಕಮಿಷನರ್, ಎಸ್‌ಪಿ ಕೆಳಗಡೆ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳ ಪೈಕಿ ಕೆಲವರು 15-20 ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿರುವ ವಿಚಾರ ನಮಗೆ ಗೊತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಿದೆ. ಆಗ ಸುಧಾರಣೆ ಸಾಧ್ಯವಿದೆ. ಇದನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸಮುದಾಯ ಮುಖಂಡರಾದ ಕಣಚೂರು ಮೋನು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X