ಉಡುಪಿ | ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

Date:

ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು, ಗ್ರಾಮೀಣ ಭಾಗದ ಸಮಸ್ಯೆಯ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಅವರ ಅನನ್ಯ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿದ್ದವು. ಕೆಲವು ವರ್ಷ ಜೀವಾ ವಿಮೆ ಎಜೆಂಟರಾಗಿದ್ದರು. ಮಾಧ್ಯಮಗಳಿಗೆ ಜಾಹೀರಾತು ಸಂಗ್ರಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

- Advertisement -

ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ‌ ಪಡಿಯಾರರು, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಉಡುಪಿಯಲ್ಲಿ ದಿನಗಳನ್ನು ಕಳೆಯುತ್ತಿದ್ದರು. ಕಳೆದ ವರ್ಷದ ಮೇ 18‌ ರಂದು, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ರಕ್ಷಿಸಿ, ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.‌ ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರು ಆಹಾರ, ಔಷಧೋಪಚಾರ ಒದಗಿಸಿ ಅಕ್ಕರೆಯಿಂದ ಪೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...