ಬಾಗೇಪಲ್ಲಿ | ಮಸಣ ಕಾರ್ಮಿಕರಿಂದ ಪತ್ರ ಚಳವಳಿ

Date:

Advertisements

ಮಸಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಸಣ ಕಾರ್ಮಿಕರ ಸಂಘದ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಸೋಮವಾರ ಪತ್ರ ಚಳವಳಿ ನಡೆಸಿದರು.

ಬಾಗೇಪಲ್ಲಿ ಪಟ್ಟಣದಲ್ಲಿ ಪತ್ರ ಚಳವಳಿಯಲ್ಲಿ ಭಾಗವಹಿಸಿ ಮಾತನಾಡಿದ ಮಸಣ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಕೆ.ಮುನಿಯಪ್ಪ, ನೂರಾರು ವರ್ಷಗಳಿಂದ ಸ್ಮಶಾನಗಳಲ್ಲಿ ಶವ ಹೂಳುವ, ಸುಡುವ, ಹಲಗೆ ಬಾರಿಸುವ ಮತ್ತು ಸ್ಮಶಾನಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಉಚಿತವಾಗಿ ಮಾಡುತ್ತಾ ಬಂದಿದ್ದಾರೆ. ಇದರಿಂದಾಗಿ ನೂರಾರು ಕುಟುಂಬಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿವೆ. ಇದನ್ನು ಸಾರ್ವಜನಿಕರ ಸೇವೆಯೆಂದು ಇದುವರೆಗೂ ಯಾರೂ ಗುರುತಿಸಿಲ್ಲ. ಆದ್ದರಿಂದ ಉಚಿತ ಕೆಲಸದಿಂದ ಮುಕ್ತಿಗೊಳಿಸಿ ವೇತನ ನೀಡುವಂತೆ ಆಗ್ರಹಿಸಿದರು.

ಮಸಣ ಕಾರ್ಮಿಕರೆಂದು ಸರ್ಕಾರಿದಂದ ಅಧಿಕೃತವಾಗಿ ಗುರುತಿಸಬೇಕು. ಕೂಡಲೇ ಗಣತಿ ಮಾಡಬೇಕು, 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಮಾಸಾಶನ ನೀಡಬೇಕು. ಶವಸಂಸ್ಕಾರಕ್ಕೆ ಕುಣಿ ಅಗೆಯುವ ಕೆಲಸ ನರೇಗಾ ಕೆಲಸವನ್ನಾಗಿಸಿ ಪರಿಕರಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಈ ಸಂದರ್ಭದಲ್ಲಿ ಸುಬ್ಬರಾಯಪ್ಪ, ಮೆಹಬೂಬ್, ನರಸಿಂಹಪ್ಪ, ಪರಗೊಡು ಪಂಚಾಯಿತಿ, ನರಸಿಂಹಪ್ಪ, ಬಾಬು, ಮುನಿಯಪ್ಪ, ನರಸಮ್ಮ, ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಪಂಚಾಯಿತಿ ಆದಿನಾರಾಯಣಪ್ಪ, ಶ್ರೀರಾಮಪ್ಪ, ದಪರ್ತಿ, ಪಂಚಾಯಿತಿ ಕೃಷ್ಣಪ್ಪ, ವೆಂಕಟೇಶ್ ಮೂರ್ತಿ, ನಾರಾಯಣ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಮಸಣ ಕಾರ್ಮಿಕರು ಹಾಗೂ ತಮಟೆ ಕಲಾವಿದರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X