ತೊಗರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಬೃಹತ್ ಪ್ರತಿಭಟನೆ: ಕಲಬುರಗಿ ಬಂದ್ ಯಶಸ್ವಿ

Date:

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ನಡೆಸಿದ ಕಲಬುರಗಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರತಿದ್ದು, ತೊಗರಿಯ ಕಣಜವಾದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ನೆಟೆರೋಗದಿಂದ ಹಾನಿಯಾಗಿರುವ ತೊಗರಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

- Advertisement -

ಮುಂಜಾನೆ ಪ್ರತಿಭಟನೆಗೆ ಇಳಿದ ರೈತ ಮುಖಂಡರು, “ಈ ವರ್ಷ ತೊಗರಿ ಬೆಳೆಗಾರರಿಗೆ ತುಂಬಾ ನಷ್ಟವಾಗಿದೆ. ಕೂಡಲೇ ರೈತರ ಸಮಸ್ಯೆಗಳನ್ನು ಈಡೇರಿಸಬೇಕು. ಬೆಳೆಹಾನಿ ಅನುಭವಿಸಿದ ಸಾವಿರಾರು ರೈತರು ಬೀದಿಪಾಲಾಗಿದ್ದಾರೆ. ಸರ್ಕಾರ‌ ಅವರ ನೆರವಿಗೆ ನಿಂತು ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು” ಎಂದು ಘೋಷಣೆಗಳನ್ನು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕಲಬುರಗಿ ಬಂದ್ ಘೋಷಣೆ ನಿಮಿತ್ತ ಇಂದು ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗೆ ಇಳಿದಿಲ್ಲ, ಇದರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳಿಲ್ಲದೆ ಬಿಕೋ ಎನ್ನುತ್ತಿರುವುದು ಕಂಡುಬಂದಿದೆ.

ಸ್ವಯಂಪ್ರೇರಿತ ಬಂದ್

ಕಲಬುರಗಿ ಬಂದ್ ಘೋಷಣೆ ಮಾಡಿದ್ದರಿಂದ ಇಲ್ಲಿನ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ, ರೈತರ ಹೋರಾಟಕ್ಕೆ ಬೆಂಬಲ ನೀಡಿದರು. ನಿತ್ಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ ತೆರೆಯುತ್ತಿದ್ದ ಅಂಗಡಿ, ಹೋಟೆಲ್ ಸೇರಿದಂತೆ ಇತರ ವಾಣಿಜ್ಯ ಮಳಿಗೆಗಳೂ ಮುಚ್ಚಿದ್ದು, ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಹಲವು ಸಂಘಟನೆಗಳ ಬೆಂಬಲ

ತೊಗರಿಗೆ ವಿಶೇಷ ಪ್ಯಾಕೇಜ್ ಅನುದಾನ ಘೋಷಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿದ್ದ ಕಲಬುರಗಿ ಬಂದ್‌ಗೆ ವಿದ್ಯಾರ್ಥಿ ಸಂಘಟನೆ, ಕೂಲಿ ಕಾರ್ಮಿಕ ಸಂಘಟನೆ, ಸಿಐಟಿಯು, ದಲಿತ ಸಂಘಟನೆ, ಎಸ್‌ಎಫ್‌ಐ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಗಳು ಬೆಂಬಲ ಸೂಚಿಸಿದವು.

ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೊಡಿಹಳ್ಳಿ ಚಂದ್ರಶೇಖರ ಬಣ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೆ ಎಸ್ ಪುಟ್ಟಣ್ಣಯ್ಯ ಬಣ, ಸೆಂಟ್ರಲ್ ಆಫ್ ಇಂಡಿಯಾ ಟ್ರೇಡ್ ಯೂನಿಯನ್ ದಲಿತ ಸಂಘರ್ಷ ಸಮಿತಿ ಡಾ ಅಂಬೇಡ್ಕರ್ ವಾದಿ, ದಲಿತ ಸಂಘರ್ಷ ಸಮಿತಿ(ಮಾವಳ್ಳಿ ಶಂಕರ್ ಬಣ), ಕಟ್ಟಡ ಕಾರ್ಮಿಕ ಸಂಘಗಳ, ತೊಗರಿ ಬೆಳೆಗಾರರ ಸಂಘ, ಆಹಾರ ಧಾನ್ಯಗಳ ಮತ್ತು ಬೀಜ ವ್ಯಾಪಾರಿಗಳ ಸಂಘಗಳು, ಚೇಂಬರ್ ಆಫ್ ಕಾಮರ್ಸ್, ಅಡಕೆ ವ್ಯಾಪಾರಸ್ಥರು, ಮಾಲಿಕರ ಸಂಘ, ಕಿರಾಣಿ ಬಜಾರ್ ವ್ಯಾಪಾರಸ್ಥರ ಸಂಘ, ಬೀದಿಬದಿ ವ್ಯಾಪಾರಸ್ಥರು, ದಾಲ್ ಮಿಲ್ಲರ್ ಅಸೋಶಿಯೇಶನ್ ಸಂಘ, ಅಕ್ಕಿ ವ್ಯಾಪಾರಸ್ಥರ ಸಂಘ, ಔಷಧಿ ವ್ಯಾಪಾರಸ್ಥರ ಸಂಘ ಸೇರಿದಂತೆ ಇನ್ನೂ ಹಲವು ಸಂಘಟನೆಗಳೂ ಕೂಡಾ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಬೆಳಿಗ್ಗೆಯಿಂದ ನಡೆದಿರುವ ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ನಾಗೇಂದ್ರಪ್ಪ ಥಂಬೆ, ರಮೇಶ ರಾಗಿ, ಸುಜಾತಾ, ಇಬ್ರಾಹಿಂ ಪಟೇಲ್, ಭೀಮಾಶಂಕರ ಮಾಡಿಯಾಳ, ಕರೆಪ್ಪ, ಸಿದ್ದು, ಎಸ್ ಆರ್ ಕಲ್ಲೂರ್, ಅರ್ಜುನ್ ಗೊಬ್ಬೂರ್, ಮುಬೀನ್ ಅಹ್ಮದ್, ದಿಲೀಪ್ ನಾಗೋರೆ, ಬಾಬು ಹೂವಿನಹಳ್ಳಿ, ಮಹಾಂತೇಶ್ ಜಮಾದಾರ್,ಅರ್ಜುನ್ ಗೊಬ್ಬರ, ಅಲ್ಲಪಟೇಲ್ ಹಿಜೇರಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...