ಚಿಕ್ಕಬಳ್ಳಾಪುರ | ಮೀಟರ್ ದರ ಏರಿಕೆ ಖಂಡಿಸಿ ಫೆ.24ರಂದು ಪ್ರತಿಭಟನೆ

Date:

Advertisements

ಮೀಟರ್‌ಗಳ ಬೆಲೆ ಏರಿಕೆ, ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಬೆಲೆ ನಿಗದಿ ಮಾಡಿರುವುದು, ಗುತ್ತಿಗೆದಾರರ ಪರವಾನಗಿ ದರ ಹೆಚ್ಚಳ ಸೇರಿದಂತೆ ವಿದ್ಯುತ್‌ ಸರಬರಾಜು ಕಂಪನಿಗಳು ವಿವಿಧ ಸೌಲಭ್ಯಗಳ ಬೆಲೆ ಏರಿಕೆಯನ್ನು ಖಂಡಿಸಿ ಫೆ.24ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಬಾಬು ಹೇಳಿದರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾವಿರ ರೂಪಾಯಿಯ ಮಾಪಕವನ್ನು ಏಕಾಏಕಿ 4998ರೂ., 2500 ರೂಪಾಯಿಯ ಮಾಪಕದ ಬೆಲೆಯನ್ನು 8800ರೂ. ಮತ್ತು 3500 ರೂ. ಇದ್ದ ಮಾಪಕದ ಬೆಲೆಯನ್ನು 28080 ರೂಪಾಯಿಗೆ ಏಕಾಏಕಿ ಬೆಲೆ ಏರಿಕೆ ಮಾಡಿದ್ದು, ಸರ್ಕಾರ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳು ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿದ್ಯುತ್‌ ಪರಿವೀಕ್ಷಣಾಲಯದಿಂದ ಗುತ್ತಿಗೆದಾರರ ಪರವಾನಗಿ ಪಡೆಯಲು ಈ ಹಿಂದೆ ಪ್ರಥಮ ದರ್ಜೆ ಪರವಾನಗಿಗೆ 3000 ರೂ. ಇತ್ತು, ಇದೀಗ 10000ಕ್ಕೆ ಏರಿಸಲಾಗಿದೆ. ಸೂಪರ್‌ ಗ್ರೇಡ್‌ ಪರವಾನಗಿ ದರವನ್ನು 5000 ದಿಂದ 50000 ರೂ.ಗೆ ಏರಿಕೆ ಮಾಡಲಾಗಿದೆ. ಇದನ್ನು ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

Advertisements

ರೈತ ಸಂಘ ಜಿಲ್ಲಾಧ್ಯಕ್ಷ ಗೋಪಾಲ್‌ ಮಾತನಾಡಿ, ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಈ ಹಿಂದೆ ಅಕ್ರಮಸಕ್ರಮ ಯೋಜನೆಯಡಿಯಲ್ಲಿ 30 ಸಾವಿರ ರೂ. ನಿಗದಿಯಾಗಿತ್ತು. ಆದರೆ, ಇದೀಗ ಇದ್ದಕ್ಕಿದ್ದಂತೆ 2 ಲಕ್ಷದಿಂದ 10 ಲಕ್ಷದವರೆಗೆ ಏರಿಕೆಯಾಗಿದ್ದು, ಇದರಿಂದ ರೈತರಿಗೆ ದೊಡ್ಡ ಹೊರೆಯಾಗಲಿದೆ ಎಂದು ಕಿಡಿಕಾರಿದರು.

ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ವಿದ್ಯುತ್‌ ಪರಿವರ್ತಕ ಚಾಲ್ತಿಗೆ ಸರ್ಕಾರ 3400 ರೂ.ಗಳಿಂದ 9500 ರೂ.ಗಳಿಗೆ ಏರಿಕೆ ಮಾಡಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಫೆ.24ರಂದು ವಿದ್ಯುತ್‌ ಗುತ್ತಿಗೆದಾರರ ಸಂಘ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದಕ್ಕೆ ರೈತ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಈ ಮೂಲಕ ದರ ಪರಿಶೀಲನೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

ಸುದ್ದಿಗೋಷ್ಠಿಯಲ್ಲಿ ವಿದ್ಯುತ್‌ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆಂಜಿನಪ್ಪ, ಭೈರೆಡ್ಡಿ, ಮುನಿರಾಜು, ಬಸವರಾಜು, ಮಂಜುನಾಥ್‌, ಪ್ರಸಾದ್‌, ನವೀನ್‌ ಹಾಗೂ ರೈತ ಸಂಘದ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X