ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ: ಮರುಪಾವತಿಗೆ ಕಾಲಾವಕಾಶ ನೀಡಲು ಒತ್ತಾಯ

Date:

Advertisements

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌ ಮರುಪಾವತಿಸಲು ಒಂದೆರಡು ಬಾರಿ ಅವಕಾಶ ಕೊಡಬೇಕು ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ( ಪಾವಗಡ ಶ್ರೀ ರಾಮ ಬಣ) ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

“ಪ್ರಸ್ತುತ ಮನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು, ದುರ್ಘಟನೆಗಳು ನಡೆದಿರುತ್ತವೆ. ಇಂತಹ ಸಂದರ್ಭದಲ್ಲಿಯೂ ಫೈನಾನ್ಸ್‌ಗಳಿಂದ ನಿತ್ಯವೂ ಕಿರುಕುಳ ಹೆಚ್ಚಾಗುತ್ತಿದೆ. ಸಾಲ ವಾಪಸ್ ನೀಡುವುದಿಲ್ಲವೆಂದು ಹೇಳುವುದಿಲ್ಲ. ಸ್ವಲ್ಪ ಕಾಲಾವಕಾಶ ಕೊಡಬೇಕು” ಎಂದು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯಾದ್ಯಂತ ಕಿರುಸಾಲ ಪಡೆದ ಮಹಿಳೆಯರ ಮನೆಗೆ ನುಗ್ಗಿ ಸಮಯದ ಪ್ರಜ್ಞೆ ಇಲ್ಲದೆ ಮನೆಯಲ್ಲಿ ಧರಣಿ ಹೂಡಿದಂತೆ ಕುಳಿತುಕೊಂಡು ಹಣ ಕಟ್ಟುವಂತೆ ಒತ್ತಾಯಿಸುತ್ತಾರೆ. ಮನೆಯಂಗಳದಲ್ಲಿ, ಓಣಿಯಲ್ಲಿ ನಿಂತು ನಮ್ಮ ಮರ್ಯಾದೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. ಹಣ ಕಟ್ಟಲು ಕಾಲಾವಕಾಶ ಕೋರಿದರೂ ಕೂಡ ಬಾಯಿಗೆ ಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾರೆ ಎಂದು ಹೇಳಿದರು.

Advertisements

ಸಾಲ ಪಡೆದ ಮಹಿಳೆಯರಿಗೆ ನೆಮ್ಮದಿಯಿಲ್ಲದಂತಾಗಿದೆ. ಕೆಲವು ಸೂಕ್ಷ್ಮ ಮತಿಯ ಹೆಣ್ಣು ಮಕ್ಕಳು ಇವರ ಕಿರಿಕಿರಿಯಿಂದಾಗಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟರೆ ಇದಕ್ಕೆ ನೇರ ಹೊಣೆಗಾರರು ಮೈಕ್ರೋ ಫೈನಾನ್ಸ್ ಕಂಪನಿಗಳೇ ಆಗುತ್ತವೆ ಎಂದು ಕಿಡಿಕಾರಿದರು.

ಸರಕಾರದ ಸುತ್ತೋಲೆ ಮೂಲಕ ಕೊಟ್ಟಿರುವ ಸಾಲಗಳಿಗೆ ಒತ್ತಾಯ ಪೂರ್ವಕವಾಗಿ ಹಣ ಕಟ್ಟುವಂತೆ ಪೀಡಿಸಬಾರದು. ಒಂದೆರಡು ಬಾರಿ ಕಾಲಾವಕಾಶ ಕೊಡಬೇಕು ಎಂದು ಸಂಘಟನೆಯಿಂದ ಮನವಿ ಮಾಡಿದರು.

ಈ ವೇಳೆ ರಾಜ್ಯಾಧ್ಯಕ್ಷರು ಹೇಮರಾಜ್ ಅಸ್ಕಿಹಾಳ, ಜಿಲ್ಲಾಧ್ಯಕ್ಷ ನರಸಿಂಹಲು , ಪ್ರಭು ಮರ್ಚಟ್ಹಾಲ , ನರಸಿಂಹಲು ಪೋತಗಲ್ , ಉರುಕುಂದಪ್ಪ , ತಾಯಣ್ಣ ಗದಾರ , ಲಿಂಗಣ್ಣ ಮಾಡಗಿರಿ , ಎನ್ ಸುನೀಲ್ , ಸಿ ರಾಘವೇಂದ್ರ , ಪ್ರವೀಣ ಕುಮಾರ , ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X