ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

Date:

Advertisements

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಜಿಗನಹಳ್ಳಿ ನಿವಾಸಿ ಗಿರೀಶ್‌ ಅವರು ಮೈಕ್ರೋಫೈನಾನ್ಸ್‌ನಿಂದ ಸಾಲ ಪಡೆದು, ಕೃಷಿ ಕೆಲಸಗಳಿಗಾಗಿ ಟ್ರ್ಯಾಕ್ಟರ್ ಖರೀದಿದ್ದರು. ಆದರೆ, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಲಾಗದ ಕಾರಣಕ್ಕೆ, ಸಾಲ ನೀಡಿದ್ದವರು, ಅವರ ಟ್ರ್ಯಾಕ್ಟರ್‌ಅನ್ನು ಕಿತ್ತುಕೊಂಡಿದ್ದಾರೆ. ಇದರಿಂದ ಮನನೊಂದ ಗಿರೀಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನರಸಿಂಹಯ್ಯ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳೆ ಬಿತ್ತನೆಗಾಗಿ ಅವರು ಸಾಲ ಮಾಡಿದ್ದರು. ಆದರೆ, ಬೆಳೆ ನಷ್ಟವಾಗಿ, ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

Advertisements

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂತೆನಹಳ್ಳಿ ನಿವಾಸಿ ರವಿ ಎಂಬವರು ತಮ್ಮ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ಮೈಕ್ರೋಫೈನಾನ್ಸ್‌ ಬಳಿ 9 ಲಕ್ಷ ರೂ. ಸಾಲ ಮಾಡಿದ್ದರು. ಆದರೆ, ಉತ್ತಮ ಇಳುವರಿಯೂ ಬಾರದೆ, ಸರಿಯಾದ ಬೆಲೆಯೂ ಸಿಗದೆ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೀತೂರು ಗ್ರಾಮದ ಎಲ್.ಕೆ ಸುರೇಶ್ ಅವರು ಬ್ಯಾಂಕ್‌ನಲ್ಲಿ 21 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ, ಬೆಳೆ ನಷ್ಟದಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಮರುಪಾವತಿ ಮಾಡುವಂತೆ ಬ್ಯಾಂಕ್‌ನಿಂದ ಪದೇ-ಪದೇ ನೋಟಿಸ್‌ಗಳನ್ನು ನೀಡಲಾಗಿತ್ತು. ಹೀಗಾಗಿ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅವರ ಪತ್ನಿ ಕಲ್ಪನಾ ಅವರು ನೀಡಿದ ದೂರಿನ ಆಧಾರದ ಮೇಲೆ ಹರಿಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 7

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X