ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಈಗ ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಇಂತಹ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಎಎಪಿ ಅಭಿಪ್ರಾಯಪಟ್ಟಿದೆ.
ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ಶಿವಾನಂದ ಪಾಟೀಲರ ರಾಜೀನಾಮೆಯನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ
ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಐಟಿ ದಾಳಿಯಾಗಿ ನೂರಾರು ಕೋಟಿ ಸಿಕ್ಕಿದೆ. ಅಕ್ರಮ ಹಣ ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಹರಿದುಹೋಗುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯ. ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಜನ ವಿರೋಧಿ ಸರ್ಕಾರವೆಂಬ ಹಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.