ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅನುಚಿತ ವರ್ತನೆ: ಲೈವ್‌ ಸ್ಟ್ರೀಮಿಂಗ್‌ಗೆ ನಿರ್ಬಂಧ ಹೇರಿದ ಹೈಕೋರ್ಟ್‌

Date:

Advertisements

ಕೆಲವು ನ್ಯಾಯಾಲಯಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌, ಇನ್ನು ಮುಂದೆ ಲೈವ್‌ ಸ್ಟ್ರೀಮಿಂಗ್‌ಗೆ ನಿರ್ಬಂಧ ವಿಧಿಸಿದೆ.

ತಂತ್ರಜ್ಞಾನ ದುರುಪಯೋಗವಾಗುತ್ತಿದೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೋ ಕಾನ್ಫರೆನ್ಸ್‌ಗೆ ಇನ್ನು ಮುಂದೆ ನಿರ್ಬಂಧಿಸುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ತಿಳಿಸಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ, ಇದು ದುರದೃಷ್ಟಕರ ಸಂಗತಿ. ನಾವು ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಅನ್ನು ನಿಲ್ಲಿಸುತ್ತಿದ್ದೇವೆ. ಕೆಲವು ಕಿಡಿಗೇಡಿಗಳು ಇದನ್ನು ದುರುಪಯೋಗಪಡಿಸುತ್ತಿದ್ದಾರೆ. ಹಾಗಾಗಿ, ನಾವು ಇನ್ನು ಮುಂದೆ ಯಾವುದೇ ವೀಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯವನ್ನು ಅನುಮತಿಸುತ್ತಿಲ್ಲ ಎಂದು ತಿಳಿಸಿದರು.

Advertisements

‘ಈ ರೀತಿಯ ಬೆಳವಣಿಗೆಗಳಾಗದಿದ್ದರೆ ಕರ್ನಾಟಕ ಹೈಕೋರ್ಟ್ ಈ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ. ನ್ಯಾಯಾಲಯವು ಯಾವಾಗಲೂ ಸಾರ್ವಜನಿಕರಿಗೆ ಮತ್ತು ವಕೀಲರು, ಸಲಹೆಗಾರರಿಗೆ ಉತ್ತಮ ಸೇವೆಗಳಿಗೆ ತಂತ್ರಜ್ಞಾನವನ್ನು ಬಳಸುವುದರ ಪರವಾಗಿಯೇ ನಿಂತಿದೆ. ಮಾಧ್ಯಮದವರಿಗೆ ನಮ್ಮ ಈ ನಿರ್ಧಾರದಿಂದ ತೊಂದರೆಯಾಗಬಹುದು. ಆದರೂ, ಇದೊಂದು ಅನಿರೀಕ್ಷಿತ ಬೆಳವಣಿಗೆ. ನ್ಯಾಯಾಲಯ ವ್ಯವಸ್ಥೆಯ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ. ನಮ್ಮೊಂದಿಗೆ ಸಹಕರಿಸಬೇಕು’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ವಿನಂತಿಸಿದರು.

ಸೈಬರ್‌ ಭದ್ರತಾ ಕಾರಣಗಳಿಗಾಗಿ ಕರ್ನಾಟಕ ಹೈಕೋರ್ಟ್‌ನ ಬೆಂಗಳುರು, ಧಾರವಾಡ, ಕಲಬುರ್ಗಿ ಪೀಠಗಳಲ್ಲಿ ಸದ್ಯಕ್ಕೆ ವಿಡಿಯೊ ಕಾನ್ಫರೆನ್ಸ್‌ ಅಮಾನತುಗೊಳಿಸಲಾಗಿದೆ ಎಂದು ರಿಜಿಸ್ಟ್ರಾರ್‌ ಜನರಲ್‌ ಭರತ್‌ ಕುಮಾರ್‌ ತಿಳಿಸಿದ್ದಾರೆ. ಹೀಗಾಗಿ, ವಿಡಿಯೊ ಕಾನ್ಫರೆನ್ಸ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ನಿಲ್ಲಿಸಲಾಗಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X