ಭಿನ್ನಾಭಿಪ್ರಾಯಗಳಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆ: ಕಸಾಪ ಅಧ್ಯಕ್ಷ ಡಾ ಮಹೇಶ್‌ ಜೋಶಿ

Date:

Advertisements

ಭಿನ್ನಾಭಿಪ್ರಾಯದಿಂದಾಗಿ ಬಳ್ಳಾರಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ರವಾನೆಯಾಗಿದ್ದರಿಂದ ಸಂಡೂರಿನಲ್ಲಿ ನಡೆಯಬೇಕಿದ್ದ ಸಭೆಯನ್ನು ರದ್ದು ಮಾಡಲಾಗಿದೆ. ಸಂಡೂರಿನ ಸಭೆ ರದ್ದಾಗಲು ಕಸಾಪದ ಕೇಂದ್ರ ಸಮಿತಿಯಲ್ಲಿ ಐದು ವರ್ಷ ಕೆಲಸ ಮಾಡಿರುವ ವಸುಂದರ ಭೂಪತಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿರುವುದೇ ಕಾರಣ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ವೈಯಕ್ತಿಕ ದ್ವೇಷ ಇಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ ಮಹೇಶ ಜೋಶಿ ಹೇಳಿದ್ದಾರೆ.

ಜಮಖಂಡಿ ನಗರದ ರಮಾನ ನಿವಾಸ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸತ್ಯಕಾಮರ ಸುಮ್ಮನೆ ಎಂಬ ಹೆಸರಿನ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ಸಾಮಾನ್ಯ ಸಭೆ ನಡೆಯಲು ಉದ್ದೇಶಿಸಲಾಗಿದೆ” ಎಂದರು.

“ಕಸಾಪದ ಘನತೆ ಗೌರವಕ್ಕೆ ಧಕ್ಕೆ ತರುವರ ವಿರುದ್ಧ ಮಾನನಷ್ಟ ಮೊಖದ್ದಮೆ ಹೂಡಲಾಗಿದೆ. ಎಸ್‌ ಟಿ ಸಿದ್ದರಾಮಯ್ಯ, ಜಯಪ್ರಕಾಶ ಗೌಡ, ನಾಗರಾಜ, ವೆಂಕಟರಮಣ, ನಿವೃತ್ತ ಅಧಿಕಾರಿ ಸಲೀಂ ಅವರ ವಿರುದ್ಧ ಮೊಖದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಯಾವುದೋ ವ್ಯಕ್ತಿಗಳ ಪ್ರಭಾವಕ್ಕೆ ಮಣಿದು ಅಧಿಕಾರ ದುರುಪಯೋಗಪಡಿಸಿಕೊಂಡು ಕಸಾಪಕ್ಕೆ ಕಪ್ಪು ಚುಕ್ಕೆ ತರುವಂಥ ಕೆಲಸ ಮಾಡಿದ್ದಾರೆ. ಕಾರ್ಯಕಾರಣಿ ಸಭೆಯ ನಿರ್ಣಯದಂತೆ ಮೊಖದ್ದಮೆ ದಾಖಲಿಸಲಾಗಿದೆ” ಎಂದು ಹೇಳಿದರು.

Advertisements

ಈ ಸಂದರ್ಭ ಮಂಡ್ಯ ಅಧಿವೇಶನದ ಲೆಕ್ಕಪತ್ರ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಸರ್ಕಾರದ ಅನುದಾನದ ಸಹಾಯದಿಂದ ಕಾರ್ಯಕ್ರಮ ಮಾಡುತ್ತೇವೆ. ಅನುದಾನ ಆಯಾ ಪ್ರದೇಶದ ಜಿಲ್ಲಾಡಳಿತಕ್ಕೆ ಜಮಾ ಆಗುತ್ತದೆ. ಅದರಲ್ಲಿ ಪತ್ರಿಕೆಗಳ ಪ್ರಕಟಣೆ, ಪುಸ್ತಕ ಪ್ರಕಟಣೆ ಮುಂತಾದವುಗಳ ಜವಾಬ್ದಾರಿ ಇರುತ್ತದೆ” ಎಂದು ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಬೀದಿನಾಯಿ ಪ್ರಕರಣ: ಕೇವಲ ಎಂಟು ತಿಂಗಳಲ್ಲಿ 26 ಮಂದಿ ಸಾವು, 2.86 ಲಕ್ಷ ಪ್ರಕರಣ ದಾಖಲು

ಈ ವೇಳೆ ಅವರು “ಮದುವೆ ಹೋಟೆಲುಗಳಲ್ಲಿ ರೈಸ್ ಬದಲು ಅನ್ನ ಎಂಬ ಪದ ಉಪಯೋಗಿಸುವಂತೆ ಆಗಬೇಕು. ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡುತಿದ್ದೇವೆ. ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಪಾಲಕರು ಕನ್ನಡ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಮುಂದಾಗಬೇಕು” ಎಂದರು.

ಈ ಸಂದರ್ಭ ಪಾಟೀಲ ಪಾಂಡು, ವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಮ್ ಪೀರ ವಾಲೆಕಾರ, ಬಾಗಲಕೋಟೆ ಕಸಾಪ ಅಧ್ಯಕ್ಷ ಶಿವಾನಂದ ಸಲ್ಲಿಕೆರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X