ಕೊಡಗು | ಶಾಸಕ ಪೊನ್ನಣ್ಣ ಅವರಿಗೆ ಮಂತ್ರಿಗಿರಿ ಲಭಿಸುವ ವಿಶ್ವಾಸವಿದೆ: ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್

Date:

  • ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳು ಖಂಡಿತವಾಗಿ ಈಡೇರಲಿವೆ
  • ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು

ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ಹೇಳಿದರು.

ಮಡಿಕೇರಿ ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೊಡಗು ಜಿಲ್ಲೆಯಲ್ಲಿ ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸುವ ವಿಶ್ವಾಸವಿದೆ” ಎಂದರು.

“ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಭಿಸಿರುವ ಅಭೂತಪೂರ್ವ ಫಲಿತಾಂಶ ಮುಂಬರುವ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಮಂದಿ ಕಾಂಗ್ರೆಸ್‌ ಸಂಸದರು ಆಯ್ಕೆಯಾಗಿ ಪಾರ್ಲಿಮೆಂಟ್‌ಗೆ ಹೋಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಲ್ಪಸಂಖ್ಯಾತ ಸಮುದಾಯದ ಯುವಕರು ಯಾರ ವಂಚನೆ ಕುತಂತ್ರಕ್ಕೆ ಬಲಿಯಾಗ ಬಾರದು. ಸಾಮಾಜಿಕ ಜಾಲತಾಣಗಳಾಸ ಫೇಸ್‌ಬುಕ್‌, ವಾಟ್ಸ್‌ ಆಪ್‌ಗಳಲ್ಲಿ ಬರುವಂತಹ, ಬರಹ, ಸಂದೇಶಗಳ ಪ್ರಚೋದನೆಗೆ ಕಿವಿಗೊಡಬಾರದು” ಎಂದು ಸಲಹೆ ನೀಡಿದರು.

“ವಿಜಯೋತ್ಸವ ಸಂಧರ್ಭದಲ್ಲಿ ವ್ಯೆಕ್ತಿಯೊಬ್ಬರು  ಇಸ್ಲಾಮೀ ಧ್ವಜವನ್ನು ಪ್ರದರ್ಶಿಸಿದಾಗ ಸಂಘಪರಿವಾರ ಅದನ್ನು ಪಾಕಿಸ್ಥಾನದ ದ್ವಜ ಎಂದು ಬಿಂಬಿಸಿ ಗಲಬೆಯ ಹುನ್ನಾರಕ್ಕೆ ಯತ್ನಿಸಿತ್ತು. ಇಂತಹದಕ್ಕೆ ಅವಕಾಶ ಮಾಡಬಾರದು” ಎಂದು ಮನವಿ ಮಾಡಿದರು.

“ಮುಸ್ಲಿಂ ಸಮುದಾಯದಲ್ಲಿ ಕೂಡ ಕೆಲವು ಕೋಮುವಾದಿ ಗಳಿದ್ದಾರೆ. ಇದನ್ನು ಅರಿತು ಸೌಹಾರ್ದದಲ್ಲಿ  ಬದುಕಬೇಕು. ಕೋಮು ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಹೊರಟ ಭಾರತಿಯ ಜನತಾ ಪಕ್ಷಕ್ಕೆ ಕನ್ನಡ ನಾಡಿನ ಜನತೆ ಅತ್ಯುತ್ತಮ ಗದ ಪ್ರಹಾರ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

“ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು. ರಾಜ್ಯದಲ್ಲಿ ನಡೆದಿರುವ ಕಾಮಗಾರಿ ಹಾಗೂ ಇತರ ಜನ ಕಲ್ಯಾಣ ಯೋಜನೆಗಳ ಅವ್ಯವಹಾರಗಳ ಬಗ್ಗೆ ಹಾಗೂ ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿಯ ತಡೆಗೋಡೆ ಕಳಪೆ ಕಾಮಗಾರಿಯ ಬಗ್ಗೆ ಸೂಕ್ತ ತನಿಖೆ ಮಾಡಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷ ಎಂ ಎ ಉಸ್ಮಾನ್, ನಗರ ಕಾಂಗ್ರೆಸ್‌ ಉಪಾಧ್ಯಕ್ಷ ಎಂ ಎಂ ಯಾಕುಬ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಜಫ್ರುಲ್ಲಾ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ...

ಧಾರವಾಡ | ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಗೆ ಅಂಜುಮನ್ ಆಗ್ರಹ

ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ...

ವಿಜಯನಗರ | ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಅಕ್ರಮ ಮರಳು ದಂಧೆ ಆರೋಪ

ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...