- ಮನ್ನಾಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಕ್ಕೆ ಆಗ್ರಹ
- ಸಿಟಿ ಸ್ಕ್ಯಾನ್, ಎಮ್ಆರ್ ಐ ಹಾಗೂ ಇಸಿಜಿ ಸೌಲಭ್ಯ ಒದಗಿಸಲು ಆರೋಗ್ಯ ಸಚಿವರಿಗೆ ಮನವಿ
ಬೀದರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲ್ಲೂಕಿನ ಮನ್ನಾಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಪ್ರಾರಂಭಿಸಬೇಕು ಮತ್ತು ಮನ್ನಾಏಖೇಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದರು.
ಬೀದರ್ ನಗರದ ಗುರುನಾನಕ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ ಅವರಿಗೆ ಮನವಿ ಸಲ್ಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, “ಬೀದರ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಚಿಟಗುಪ್ಪಾ ತಾಲೂಕಿನ ಮನ್ನಾಖೆಳ್ಳಿ ಹೋಬಳಿಯು ರಾಷ್ಟ್ರೀಯ ಹೆದ್ದಾರಿ 65ರ ಹೈದ್ರಾಬಾದ್ ಮುಂಬೈ ಹೆದ್ದಾರಿಗೆ ಹತ್ತಿಕೊಂಡಿರುವುದರಿಂದ ಈ ಭಾಗದಲ್ಲಿ ಅನೇಕ ಅಪಘಾತಗಳಾಗುತ್ತಿವೆ, ಆದರೆ ತುರ್ತು ಚಿಕಿತ್ಸೆಗಾಗಿ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪರದಾಡುವಂತಾಗಿದೆ. ಮನ್ನಾಏಖೆಳ್ಳಿ ಗ್ರಾಮದ ಸಮುದಾಯ ಆರೂಗ್ಯ ಕೇಂದ್ರ ಆಸ್ಪತ್ರೆಯಲ್ಲಿ ಟ್ರೂಮಾ ಕೇರ್ ಸೆಂಟರ್ ಪ್ರಾರಂಭಿಸುವ ಮೂಲಕ ತುರ್ತು ಚಿಕಿತ್ಸೆಯ ರೋಗಿಗಳಿಗೆ ಅನೂಕೂಲ ಮಾಡಿಕೊಡುವಂತೆ” ಅವರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ ? ಬೀದರ್ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
“ಮನ್ನಾಖೆಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಟಿ ಸ್ಕ್ಯಾನ್ , ಎಮ್ಆರ್ ಐ ಹಾಗೂ ಇಸಿಜಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಉತ್ತಮ ಗುಣಮಟ್ಟದ ಚಿಕಿತ್ಸೆಗೆ ರೋಗಿಗಳಿಗೆ ಅನೂಕೂಲ ಮಾಡಿಕೊಡುವಂತೆ” ಮನವಿ ಮಾಡಿದರು.