ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಶಾಸಕ ಸಿಮೆಂಟ್‌ ಮಂಜು ಮನವಿ

Date:

Advertisements

ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಒತ್ತಾಯಿಸಿ ಶಾಸಕ ಸಿಮೆಂಟ್‌ ಮಂಜು ಅವರು ಬೆಂಗಳೂರಿನಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿದರು.

“ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ಸಕಲೇಶಪುರ ಹಾಗೂ ಆಲೂರು ತಾಲೂಕಿನಿಂದ ನಿತ್ಯವೂ ನೂರಾರು ಜನ ವಿವಿಧ ಕಾರ್ಯಗಳಿಗಾಗಿ ಬೆಂಗಳೂರಿಗೆ ಹೋಗಿ ಬರುತ್ತಿದ್ದಾರೆ. ಕೆಲವರು ಹಾಸನದಿಂದ ರೈಲು ಮುಖಾಂತರ ಬೆಂಗಳೂರಿಗೆ ಹೋದರೆ ಕೆಲವರು ದುಬಾರಿ ಬಸ್ ದರ ತೆತ್ತು ಬೆಂಗಳೂರಿಗೆ ಹೋಗುತ್ತಿದ್ದಾರೆ. ಇಂಟರ್‌ಸಿಟಿ ರೈಲು ಸದ್ಯ ಬೆಂಗಳೂರು-ಹಾಸನ ನಡುವೆ ಸಂಚರಿಸುತ್ತಿದ್ದು, ಈ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಿದರೆ ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನರು ನಿತ್ಯದ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಹೋಗಿ ಅಂದೇ ಹಿಂತಿರುಗಿ ಬರಲು ಅನುಕೂಲವಾಗುತ್ತದೆ” ಎಂದು ಹೇಳಿದರು.

ಬೆಂಗಳೂರು ಹಾಸನ ರೈಲು

ಈ ಸುದ್ದಿ ಓದಿದ್ದೀರಾ? ತುಮಕೂರು | ನಗರಾಭಿವೃದ್ಧಿಗಾಗಿ 200 ಕೋಟಿ ರೂ.ಗಳ ಅನುದಾನ : ಮಾದರಿ ನಗರ ನಿರ್ಮಾಣಕ್ಕೆ ಸಚಿವ ಜಿ. ಪರಮೇಶ್ವರ ಸೂಚನೆ

Advertisements

“ಆಸ್ಪತ್ರೆ, ಸರ್ಕಾರಿ ಕೆಲಸ, ವಿದ್ಯಾಭ್ಯಾಸ ಸೇರಿದಂತೆ ಇನ್ನು ಹಲವು ಅಗತ್ಯಗಳಿಗೆ ಆಗಾಗ ಬೆಂಗಳೂರಿಗೆ ಹೋಗಲೇ ಬೇಕಾಗುತ್ತದೆ. ಜೀವನೋಪಾಯಕ್ಕಾಗಿ ಈ ಭಾಗದ ಸಾವಿರಾರು ಜನ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂಟರ್‌ಸಿಟಿ ರೈಲನ್ನು ವಿಸ್ತರಿಸಿದರೆ, ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನಕ್ಕೆ ಬಹಳ ಅನುಕೂಲವಾಗುತ್ತದೆ. ಆಲೂರು ರೈಲು ನಿಲ್ದಾಣದಲ್ಲಿ ಎಲ್ಲ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿದ ಸಚಿವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X