ಬೀದರ್‌ | ರಾಜಕೀಯ ಲಾಭಕ್ಕಾಗಿ ಸದಾಶಿವ ಆಯೋಗ ವರದಿಗೆ ಶಾಸಕ ಪ್ರಭು ಚವ್ಹಾಣ ವಿರೋಧ: ಸುಧಾಕರ ಕೊಳ್ಳೂರ್

Date:

  • ಸದಾಶಿವ ಆಯೋಗ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ.
  • ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನ್ಯಾ. ಎ.ಜೆ. ಸದಾಶಿವ ಅವರು ವರದಿ ನೀಡಿದ್ದಾರೆ.

ನ್ಯಾಯಮೂರ್ತಿ ಏ.ಜೆ. ಸದಾಶಿವ ಆಯೋಗದ ವರದಿ ಜಾರಿಯಾದರೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ, ಔರಾದ ಶಾಸಕ ಪ್ರಭು ಚವ್ಹಾಣ ಹೇಳಿಕೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಸಹ ಸಂಚಾಲಕ ಸುಧಾಕರ ಕೊಳ್ಳುರ ಅವರು ತೀವ್ರವಾಗಿ ಖಂಡಿಸಿದ್ದಾರೆ.

“ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗ ಸಲ್ಲಿಸುವ ವರದಿ ಶೀಘ್ರವೇ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಹೇಳಿಕೆಗೆ ಔರಾದ ಶಾಸಕ ಪ್ರಭು ಚೌವ್ಹಾಣ ಅವರು ಪ್ರತಿಕ್ರಿಯಿಸಿ ಆಯೋಗದ ವರದಿ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿಯಾಗಿದೆ, ಹಾಗಾಗಿ ಈ ವರದಿ ತಿರಸ್ಕರಿಸಬೇಕು ಎಂದು ಹೇಳಿಕೆ ನೀಡಿರುವುದು ಖಂಡನೀಯ” ಎಂದಿದ್ದಾರೆ.

“ಸದಾಶಿವ ಆಯೋಗ ವರದಿ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿಯಾಗಿದ್ದರೆ ಕಳೆದ ಅವಧಿಯಲ್ಲಿ ನಿಮ್ಮದೇ ಬಿಜೆಪಿ ನೇತ್ರತ್ವದ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೀರಿ ಮತ್ತು ಈ ಶಿಫಾರಸ್ಸು ಸಮಿತಿಯಲ್ಲಿ ತಾವು ಸದಸ್ಯರಾಗಿದ್ದೀರಿ. ಅಂದು ವಿರೋಧಿಸದೇ ಒಪ್ಪಿಕೊಂಡು ಇಂದು ವಿರೋಧಿಸುತ್ತಿರುವುದು ಯಾವ ಪುರುಷಾರ್ಥಕ್ಕೆ” ಎಂದು ಸುಧಾಕರ ಕೊಳ್ಳೂರು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವರದಿ ಜಾರಿಗೊಂಡರೆ ಭೋವಿ,ಕೊರಮ ,ಕೊರಚ, ಲಂಬಾಣಿ ಹಾಗೂ ಇತರ ಸಮುದಾಯಗಳಿಗೆ ಅನ್ಯಾಯವಾಗಲಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಈ ವರದಿಯಿಂದ ಯಾವುದೇ ಪರಿಶಿಷ್ಟ ಜಾತಿಗಳಲ್ಲಿನ ಸಮುದಾಯಗಳಿಗೆ ಅನ್ಯಾಯ ಆಗುವುದಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಸಂವಿಧಾನ ಬದ್ಧವಾಗಿ ನ್ಯಾಯಮೂರ್ತಿ ಎಜೆ ಸದಾಶಿವ ಅವರು ವರದಿ ನೀಡಿದ್ದಾರೆ. ವರದಿ ಬಗ್ಗೆ ಕುಲಂಕುಶವಾಗಿ ಅಧ್ಯಯನ ಮಾಡದೆ ಕೇವಲ ರಾಜಕೀಯ ಲಾಭಕ್ಕಾಗಿ ಪ್ರಭು ಚೌವ್ಹಾಣ ಅವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಆಕ್ಷೇಪಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

“ಶೋಷಿತ ಸಮುದಾಯಗಳ ಪ್ರಗತಿ ಕಾಣಬೇಕಾದರೆ ಸದಾಶಿವ ಆಯೋಗ ವರದಿ ಜಾರಿಯಾಗಬೇಕು. ಸದಾಶಿವ ಆಯೋಗ ವರದಿಗೆ ಪ್ರಭು ಚೌವ್ಹಾಣ ಅವರು ವಿರೋಧಿಸಿದರೆ ಅವರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಸುಧಾಕರ ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...