ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

Date:

Advertisements

ಮಾಜಿ ಸಚಿವ, ಔರಾದ್‌ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್‌ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಹಣ ಹಾಕದಿದ್ದರೆ ವಿಡಿಯೊ ಶೇರ್‌ ಮಾಡುವೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.

ಈ ಕುರಿತು ಶಾಸಕ ಪ್ರಭು ಚವ್ಹಾಣ ಅವರ ಸಂಬಂಧಿ ಮುರುಳಿಧರ ಪವಾರ್‌ ಎಂಬುವವರು ನೀಡಿದ ದೂರಿನ ಮೇರೆಗೆ ಔರಾದ್ ತಾಲ್ಲೂಕಿನ ಹೊಕ್ರಣಾ ಪೊಲೀಸ್‌ ಠಾಣೆಯಲ್ಲಿ ಸೆ.8 ರಂದು ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಸಕ ಪ್ರಭು ಚವ್ಹಾಣ ಅವರ ವಾಟ್ಸ್‌ಆ್ಯಪ್ ಸಂಖ್ಯೆಗೆ ಅಪರಿಚಿತ ವ್ಯಕ್ತಿ ʼನನಗೆ ₹30 ಸಾವಿರ ಹಣ ಹಾಕಿ ಸಾಹೇಬ್ರೆ, ನನ್ನ ಮೇಲೆ ಭರವಸೆ ಇಟ್ಟು ಸಹಾಯ ಮಾಡಿ, ಹಣ ಹಾಕದಿದ್ದರೆ ಯೂಟ್ಯೂಬ್‌ನಲ್ಲಿ ವಿಡಿಯೊ ಶೇರ್‌ ಮಾಡುವೆʼ ಎಂದು ಸಂದೇಶ ಕಳುಹಿಸಿದ್ದರು. ಶಾಸಕರು ಅದನ್ನು ನೋಡಿ ಸುಮ್ಮನಾಗಿದ್ದರು.

ʼಸೆ.7ರಂದು ಸಂಜೆ ಎರಡು ಬಾರಿ ಬೇರೆ ಬೇರೆ ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಶಾಸಕ ಪ್ರಭು ಚವ್ಹಾಣ ಹಾಗೂ ಪ್ರಿಯಾಂಕಾ ಗಾಂಧಿ ಅವರ ಭಾವಚಿತ್ರ, ಮತ್ತು ಶಾಸಕರ ಭಾವಚಿತ್ರಕ್ಕೆ ಟೆಕ್ನಿಕಲ್‌ ಬಳಸಿ ಹುಡುಗಿಯೊಂದಿಗೆ ಇರುವ ಪಾಡ್‌ಕಾಸ್ಟ್‌ ಫೈಲ್‌ ವಿಡಿಯೊ ಶಾಸಕ ಪ್ರಭು ಚವ್ಹಾಣ ಅವರ ವಾಟ್ಸ್‌ಆ್ಯಪ್‌ ಸಂಖ್ಯೆಗೆ ಕಳುಹಿಸಿದ್ದರುʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಶಾಸಕ ಪ್ರಭು ಚವ್ಹಾಣ ಅವರ ಹೆಸರು ಕೆಡಿಸುವ ಉದ್ದೇಶದಿಂದ ಅಪರಿಚಿತ ವ್ಯಕ್ತಿ ಬೇರೆ ಬೇರೆ ಮೂರು ವಾಟ್ಸ್‌ಆ್ಯಪ್‌ ಸಂಖ್ಯೆಗಳಿಂದ ವಿಡಿಯೊ ಹಾಗೂ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಕೊಡದಿದ್ದರೆ ವಿಡಿಯೊ ಶೇರ್‌ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

ಈ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ 308 ಬಿಎನ್‌ಎಸ್ ಹಾಗೂ 66(D) ಐಟಿ ಎಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಂಡ ಹೊಕ್ರಣಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X