ಚಿಕ್ಕಬಳ್ಳಾಪುರ | ಪಕ್ಷ ನಿಷ್ಠರಿಗೆ ಮಾತ್ರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ : ಶಾಸಕ ಪ್ರದೀಪ್‌ ಈಶ್ವರ್

Date:

Advertisements

ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಬಿಜೆಪಿಯವರು ಅಧ್ಯಕ್ಷರಾಗಿದ್ದರು. ಈ ಬಾರಿ 16 ಮಂದಿ ಕಾಂಗ್ರೆಸ್‌ ಸದಸ್ಯರಿದ್ದಾರೆ. ಎಲ್ಲರಿಗೂ ಪಕ್ಷದಿಂದ ಟಿಕೆಟ್‌ ಕೊಟ್ಟು ಗೆಲ್ಲಿಸಿದ್ದೇವೆ. ನಾವು ಯಾರಿಗೂ ಹಣ ಕೊಡುವುದಿಲ್ಲ. ಪ್ರವಾಸ ಕಳಿಸುವುದಿಲ್ಲ. ಪಾರ್ಟಿ ಕೊಡಿಸುವುದಿಲ್ಲ. ನಿಯತ್ತಿನಿಂದ ಪಕ್ಷ ಕಟ್ಟಿದ್ದೇವೆ. ಯಾರಾದರೂ ಅಡ್ಡ ಮತದಾನ ಮಾಡಿದರೆ ಪಕ್ಷದಿಂದ ಉಚ್ಚಾಟನೆ ಮಾಡಿ, 6 ವರ್ಷ ಅನರ್ಹಗೊಳಿಸಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಸಂಸದರಿಗೆ ಕೋವಿಡ್‌ನಲ್ಲಿ ಮಾಡಿರುವ ದುಡ್ಡಿದೆ. ಹೆಣದ ಮೇಲೆ ಮಾಡಿರುವ ದುಡ್ಡಿದೆ. ಅಕ್ರಮವಾಗಿ ಮಾಡಿರುವ ದುಡ್ಡಿದೆ. ಒಂದು ವೋಟಿಗೆ ೩೦ ಲಕಷ ಕೊಡುತ್ತಿದ್ದಾರಂತೆ. ಆದರೆ, ನಾವು ಯಾರಿಗೂ ಹಣ ಹಂಚುವುದಿಲ್ಲ. ಅಯೋಗ್ಯರಿಗೆ ಹಣ ಹಂಚುವ ಬದಲು ಬಡ ಮಕ್ಕಳಿಗೆ ಕೊಟ್ಟರೆ ಅನುಕೂಲವಾಗುತ್ತದೆ. ಇದೇ ನನ್ನ ರಾಜಕಾರಣ ಶೈಲಿ. ತಲೆ ಹೊಡೆದು ರಾಜಕಾರಣ ಮಾಡುವುದಿಲ್ಲ ಎಂದು ಕಿಡಿಕಾರಿದರು.

Advertisements

ಕರ್ನಾಟಕದಲ್ಲಿ ಅಹಿಂದ ನಾಯಕನನ್ನು ಉಳಿಸಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಅವರ ಪರ ನಾವೆಲ್ಲಾ ಗಟ್ಟಿಯಾಗಿ ನಿಲ್ಲುತ್ತೇವೆ. ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಭಯ. ಅಹಿಂದ ನಾಯಕನನ್ನು ಸಹಿಸಿಕೊಳ್ಳುವ ಶಕ್ತಿ, ಸೌಜನ್ಯ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರಿಗೆ ಇಲ್ಲ. ಅದಕ್ಕಾಗಿ ನಾಳೆ ಸುಮಾರು 2 ಸಾವಿರ ಜನ ರಾಜಭವನ ಚಲೋ ಹೊರಟಿದ್ದೇವೆ. ನಾನು ಸಹ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ಆಪರೇಷನ್‌ ಕಮಲದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕರು, ಅದು ಸಾಧ್ಯವಿಲ್ಲ. 135 ಜನ ಶಾಸಕರಿದ್ದಾರೆ. ನಮ್ಮ ಈ ಸರಕಾರದಲ್ಲಿ ಡಾ.ಕೆ.ಸುಧಾಕರ್‌ ತರ ಯಾರು ಇಲ್ಲ. ಹಾಗಾಗಿ ಯಾರೂ ಆಪರೇಷನ್‌ಗೆ ಒಳಪಡಲ್ಲ. ಬಿಜೆಪಿಯವರಿಗೆ ನಮ್ಮನ್ನ ಕೊಂಡುಕೊಳ್ಳುವ ಶಕ್ತಿ ಇದೆಯಾ?. ಅವೆಲ್ಲಾ ಮರೆಯಬೇಕು ಅವರು ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X