ವಿಜಯಪುರ | ಜಿಟಿಸಿಸಿ ತರಬೇತಿ ಕೇಂದ್ರ ಸ್ಥಾಪಿಸಲು ಶಾಸಕ ಯಶಚಂತರಾಯಗೌಡ ಪಾಟೀಲ್ ಒತ್ತಾಯ

Date:

Advertisements

ರಾಜ್ಯದ 31 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಜಿಟಿಸಿಸಿ ಕೇಂದ್ರಗಳಿವೆ. ಆದರೆ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಾತ್ರ ಇಲ್ಲ. ಹೀಗಾಗಿ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜಿಟಿಸಿಸಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು ಪ್ರಾರಂಭಿಸಬೇಕು ಎಂದು ಸರ್ಕಾರವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಿಗೆ ಜಿಟಿಸಿಸಿ ಸ್ಥಾಪನೆ ಬಗ್ಗೆ ಪ್ರಶ್ನೆ ಕೇಳಿದರು. “ಜಿಟಿಸಿಸಿ ಕೇಂದ್ರ ಮಂಜೂರು ಮಾಡಲು ಅನುಸರಿಸಬೇಕಾದ ಮಾನದಂಡಗಳು ಇಂಡಿ ತಾಲೂಕಿನಲ್ಲಿವೆ. ಇಂಡಿ ತಾಲೂಕು ಕಂದಾಯ ಉಪ ವಿಭಾಗಾಧಿಕಾರಿ ಕೇಂದ್ರವಾಗಿದೆ.
ಮತ್ತು ಇಂಡಿ ಪಟ್ಟಣದ ವಸಂತ ನಗರದಲ್ಲಿ ಸರ್ವೇ ನಂ.738ರಲ್ಲಿ ಯೋಜನೆಗೆ ಅವಶ್ಯವಿರುವ 19 ಎಕರೆ ಜಮೀನು ಇದೆ” ಎಂದು ತಿಳಿಸಿದರು.

“ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಕೂಡ ತಿಳಿಸಲಾಗಿದೆ. ಸಂಬಂಧಿತ ಕಡತ ಲಗ್ತಿಸಿದ್ದಲ್ಲದೆ, ಎಐಸಿಟಿ ಈ ಅಖಿಲ ಭಾರತ ತಾಂತ್ರಿಕ ಮಹಾವಿದ್ಯಾಲಯಗಳ ಒಕ್ಕೂಟದ ಮಾರ್ಗ ಸೂಚಿಯಂತೆ ಇಂಡಿ ತಾಲೂಕಿನಲ್ಲಿ 39 ಪ್ರೌಢಶಾಲೆಗಳಿವೆ. ಔದ್ಯೋಗ ತರಬೇತಿ ಕೇಂದ್ರ, ಝಳಕಿಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಮತ್ತು ಖಾಸಗಿ ಇಂಜಿನಿಯರಿಂಗ್ ಮಹಾ ವಿದ್ಯಾಲಯಗಳಿವೆ” ಎಂದರು.

Advertisements

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಸಾಧಕ ಬಾಧಕ ಪರಿಶೀಲಿಸಿ ಅರ್ಥಿಕ ಇಲಾಖೆಯ ಸಹ ಮತ ಮೇಲೆ ಜಿ.ಟಿ.ಸಿ.ಸಿ. ಕೇಂದ್ರ ಇಂಡಿಯಲ್ಲಿ ಸ್ಥಾಪಿಸಲು ಪರಿಶೀಲಿಸಲಾಗುವುದು” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X