ಹಾವೇರಿ | ರೈತರ ಸಾಲ ಮನ್ನಾ ಮಾಡಿದರೆ ಮಾತ್ರ ಮೋದಿ ಮತ್ತೆ ಪ್ರಧಾನಿ ಆಗಲು ಸಾಧ್ಯ: ಉಡಚಪ್ಪ ಮಾಳಗಿ

Date:

Advertisements

ಸ್ವತಂತ್ರ‌ ಭಾರತದ ಆಧಾರ ಸ್ತಂಭವಾಗಿರುವ ದೇಶ ರೈತರು ಸಂಕಷ್ಟದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಶಕದ ಕಾಲ ದೇಶವನ್ನು ಆಳುತ್ತಿದ್ದಾರೆ. ರೈತರ ಸಂಕಷ್ಟ ನೋವುವನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಅವರು ವಿಫಲರಾಗಿದ್ದಾರೆ. ದೇಶದ ರೈತರ ಸಾಲ ಮನ್ನಾ ಮಾಡಿದರೆ ಮಾತ್ರ ಅವರು ಮತ್ತೆ ಪ್ರಧಾನಿ ಆಗಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌,ಒಬಿಸಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದ್ದಾರೆ.

ರೈತರ ಸಮಸ್ಯೆ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೇಶದ ಪ್ರತಿಯೊಬ್ಬರ ಹಸಿವನ್ನು ಇಂಗಿಸಿ ಅನ್ನ ನೀಡುವ ರೈತರ ಸಂಕಷ್ಟಕ್ಕೆ ಸರ್ಕಾರಗಳು ನೆರವಾಗಬೆಕು. ಆದರೆ, ಮೋದಿ ಅವರು ರೈತರ ವಿಚಾರದಲ್ಲಿ ಚುನಾವಣೆಗೂ ಮುನ್ನ ಕೊಟ್ಟಿದ್ದ ಭರವಸೆಯಂತೆ ನಡೆದುಕೊಳ್ಳಲಿಲ್ಲ. ಮುಂದಿನ ಲೋಕಸಭಾ ಚುನಾವಣೆ ಒಳಗಾಗಿ ಸಂಕಷ್ಟದಲ್ಲಿರುವ ದೇಶದ ರೈತರ ವಿವಿಧ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರ ರೈತರ ಭಾವನೆಗಳನ್ನು ಅರ್ಥ ಮಾಡಿಕೊಂಡು, ತಕ್ಷಣ ಸಂಪೂರ್ಣ ಸಾಲ‌ ಮನ್ನಾ ಮಾಡಬೆಕು. ಇದುವರೆಗೆ ಆತ್ಮಹತ್ಯೆ ಒಳಗಾದ ರೈತರ ಕುಟುಂಬಕ್ಕೆ ಕೇಂದ್ರದಿಂದ 20 ಲಕ್ಷ ರೂ. ಪರಿಹಾರ ನೀಡಬೇಕು. ರೈತರಿಗೆ ಸಕಾಲಕ್ಕೆ ಹೆಚ್ಚಿ ಸಾಲ ಸೌಲಭ್ಯ ನೀಡುವ ವ್ಯವಸ್ಥೆ ಮಾಡಬೇಕು. ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು. ಪ್ರತಿಯೊಂದು ತಾಲೂಕಿನಲ್ಲಿ ಕೃಷಿ ಆಧಾರಿತ ಕೈಗಾರಿಕೆ, ನಿರಂತರ ಉದ್ಯೋಗ ಆಧಾರಿತ ಬೆಳೆಗಳನ್ನು ಬೆಳೆಯಲು ಕೃಷಿ ಪ್ರೋತ್ಸಾಹ ಹಣ ಹೆಚ್ಚಿಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X