ಕೋಲಾರ | ಮಾರ್ಪಡಿಸಿದ್ದ ಬೈಕ್ ಸೈಲೆನ್ಸರ್‌ಗಳನ್ನು ರೋಡ್ ರೋಲರ್ ಬಳಸಿ ಪುಡಿ ಮಾಡಿದ ಪೊಲೀಸರು

Date:

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಕೋಲಾರ ಪೊಲೀಸರು, ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಹಿಡಿದು, ವಶಕ್ಕೆ ಪಡೆದುಕೊಂಡಿದ್ದಾರೆ. ಅಂತಹ 126 ಸೈಲೆನ್ಸರ್‌ಗಳನ್ನು ರೋಡ್‌ ರೋಲರ್ ಮೂಲಕ ಪುಡಿ ಮಾಡಿದ್ದಾರೆ.

- Advertisement -

ಕೋಲಾರದ ಅಮ್ಮಾವರಪೇಟೆಯಲ್ಲಿ ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರ ಸಮ್ಮುಖದಲ್ಲಿ ರೋಡ್ ರೋಲರ್ ಬಳಸಿ ಸೈಲೆನ್ಸರ್‌ಗಳನ್ನು ಪುಡಿ ಮಾಡಿದ್ದಾರೆ. ಸೈಲೆನ್ಸರ್‌ಗಳನ್ನು ಪುಡಿ ಮಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದ ದ್ವಿಚಕ್ರ ವಾಹನಗಳ ಮಾಲೀಕರಿಗೂ ಪೊಲೀಸರು ದಂಡ ವಿಧಿಸಿದ್ದಾರೆ. ಮಾರ್ಪಡಿಸಿದ್ದ ಸೈಲೆನ್ಸರ್‌ಗಳನ್ನು ಗುರುತಿಸುವ ಕ್ರಮಗಳನ್ನು ಮುಂದುವರೆಸಲಾಗಿದೆ” ಎಂದು ನಿಖಿಲ್ ತಿಳಿಸಿದ್ದಾರೆ.

“ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡುವವರಿಗೆ ದಂಡ ವಿಧಿಸಲಾಗಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ಬಗ್ಗೆ ನಿಗಾ ವಹಿಸುವಂತೆ ಪೊಲೀಸ್ ಸಿಬ್ಬಂದಿಗಳು ಮತ್ತು ಗಸ್ತು ತಂಡಗಳಿಗೆ ಸೂಚನೆ ನೀಡಲಾಗಿದೆ. ಅಂತವರ ವಾಹನಗಳನ್ನು ವಶಕ್ಕೆ ಪಡೆಯುವುದರ ಜೊತೆಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಅವರು ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕೇಂದ್ರ ಬಜೆಟ್ | ಚುನಾವಣಾ ಫಲಿತಾಂಶಗಳು ಮತ್ತು ಆರ್ಥಿಕ ವಾಸ್ತವಗಳೇ ಆಧಾರ

“ಹೆಚ್ಚು ಶಬ್ದ ಮಾಡಿಕೊಂಡು ಅಡ್ಡಾಡುವ ವಾಹನಗಳು ಕಂಡುಬಂದರೆ ಸಾರ್ವಜನಿಕರು ಪೊಲೀಸರಿಗೆ ತಿಳಿಸಬಹುದು. ಇದರಿಂದ ವಾಹನಗಳನ್ನು ತಕ್ಷಣವೇ ಪತ್ತೆಹಚ್ಚಲು ಸಹಾಯವಾಗುತ್ತದೆ” ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...