ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

Date:

Advertisements
  • ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ
  • ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ

ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ ‘ಮುಸ್ಲಿಮ್’ ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಐವರು ಕಾರ್ಯಕರ್ತರನ್ನು ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ.

Advertisements

ಘಟನೆ ಕಳೆದ ಜು.29ರಂದು ನಡೆದಿದ್ದರೂ, ಐದು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದಾಗ ಬೆನ್ನಟ್ಟಿಕೊಂಡು ಬಂದು ಹಿಂಜಾವೇ ಕಾರ್ಯಕರ್ತರು, ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆಂದು ದೂರಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಹತ್ಯೆಗಳಲ್ಲಿ ಮೋದಿ- ಯೋಗಿ- ಮೀಡಿಯಾ ಸಮಾನ ಪಾಲುದಾರರು

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ನಿಲ್ಲದ ಅನೈತಿಕ ಪೊಲೀಸ್‌ಗಿರಿ
ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಯುವುದನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ‘ಆ್ಯಂಟಿ ಕಮ್ಯೂನಲ್ ವಿಂಗ್’ ಸ್ಥಾಪಿಸಿ ಇಂತಹ ಘಟನೆ ನಡೆಯದಂತೆ ಶ್ರಮ ವಹಿಸುತ್ತಲೇ ಇದೆ. ಆದರೆ ಇಂತಹ ಘಟನೆಗಳಿಗೆ ಬ್ರೇಕ್ ಬಿದ್ದಿಲ್ಲ ಅನ್ನುವುದು ಮಾತ್ರ ವಿಪರ್ಯಾಸ.

ಕಳೆದ ಹತ್ತು ದಿನಗಳ ಅಂತರದಲ್ಲಿ ಕರಾವಳಿ ಭಾಗದಲ್ಲಿ ವರದಿಯಾದ ಮೂರನೇ ಘಟನೆ ಇದು. ವಾರದ ಹಿಂದೆ ಪೊಲೀಸ್ ಕುಟುಂಬ ಹಾಗೂ ಆ ಬಳಿಕ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X