ನಾನಾ ನಗರಗಳಿಗೆ ಏಕಮಾರ್ಗದ ವಿಶೇಷ ರೈಲುಗಳ ಸಂಚಾರ: ನೈರುತ್ಯ ರೈಲ್ವೆ

Date:

Advertisements

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ ನಾನಾ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

1. ಹುಬ್ಬಳ್ಳಿ- ಉತ್ತರ ಪ್ರದೇಶದ ಕಾನ್ಪುರ ನಡುವೆ ವಿಶೇಷ ರೈಲು(06557)

ಮೇ 27 ರಂದು ರಾತ್ರಿ 11:50 ಗಂಟೆಗೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಮೇ 29 ರ ಬೆಳಿಗ್ಗೆ 11:10 ಗಂಟೆಗೆ ಕಾನ್ಪುರ ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ.

Advertisements

ಈ ರೈಲು ಮಾರ್ಗದಲ್ಲಿ ಗದಗ, ಬಾದಾಮಿ, ಬಾಗಲಕೋಟೆ, ಬಸವನ ಬಾಗೇವಾಡಿ ರೋಡ್‌, ವಿಜಯಪುರ, ಸೊಲ್ಲಾಪುರ, ಕುರ್ದುವಾಡಿ, ದೌಂಡ್, ಅಹ್ಮದ್‌ನಗರ, ಕೋಪರಗಾಂವ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ರಾಣಿ ಕಮಲಾಪತಿ, ವಿರಂಗನಾ ಲಕ್ಷ್ಮೀಬಾಯಿ ಝಾನ್ಸಿ ಮತ್ತು ಓರೈ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (2) ಎಸಿ ತ್ರಿ ಟೈಯರ್ ಬೋಗಿ, (11) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು, (6) ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿವೆ.

2. ಯಶವಂತಪುರ – ವಡೋದರಾದ ವಿಶ್ವಾಮಿತ್ರಿ ನಡುವೆ ವಿಶೇಷ ರೈಲು

ಈ ರೈಲು (06565) ಮೇ 27ರಂದು ಬೆಳಿಗ್ಗೆ 8:15 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 4:30 ಗಂಟೆಗೆ ವಡೋದರಾ ನಗರದ ವಿಶ್ವಾಮಿತ್ರಿ ಜಂಕ್ಷನ್‌ಗೆ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ತುಮಕೂರು, ಅರಸೀಕೆರೆ, ಚಿಕ್ಕಜಾಜೂರ್, ದಾವಣಗೆರೆ, ಕೊಟ್ಟೂರು, ಕೊಪ್ಪಳ, ಗದಗ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಪುಣೆ, ವಸಾಯಿ ರೋಡ್, ವಾಪಿ ಮತ್ತು ಸೂರತ್ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ತ್ರಿ ಟೈಯರ್ ಬೋಗಿ, (18) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿರಲಿದೆ.

3. ಬೆಂಗಳೂರು – ಹೌರಾ ನಡುವೆ ವಿಶೇಷ ರೈಲು

ಈ ರೈಲು (06569) ಮೇ 28 ರಂದು ರಾತ್ರಿ 12:30 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 11:45 ಗಂಟೆಗೆ ಹೌರಾ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ, ಕಟಪಾಡಿ, ರೇಣಿಗುಂಟಾ, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸಾ, ವಿಜಯನಗರಂ ಜಂ, ಶ್ರೀಕಾಕುಲಂ, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್‌, ಭುವನೇಶ್ವರ, ಕಟಕ್‌, ಜಾಜ್‌ಪುರ ಕೆ. ರೋಡ್‌, ಭದ್ರಖ್, ಖರಗ್‌ಪುರ ಜಂ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ತ್ರಿ ಟೈಯರ್ ಬೋಗಿ, (14) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಹೊಂದಿರಲಿವೆ.

4. ಬೆಂಗಳೂರು – ಬಿಹಾರದ ದಾನಪುರ ನಡುವೆ ವಿಶೇಷ ರೈಲು

ಈ ರೈಲು (06567) ಮೇ 30 ರಂದು ಬೆಳಿಗ್ಗೆ 6:50 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು, ಮೂರನೇ ದಿನ ಬೆಳಿಗ್ಗೆ 8 ಗಂಟೆಗೆ ದಾನಪುರ್‌ ನಿಲ್ದಾಣವನ್ನು ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ರಣ ಬಿಸಿಲಿನ ಝಳದ ಜತೆಗೆ ಜನರಿಗೆ ಹೆಸ್ಕಾಂ ಶಾಕ್‌

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಜೋಲಾರ್‌ಪೆಟ್ಟೈ, ಕಟ್ಪಾಡಿ, ಅರಕ್ಕೋಣಂ, ಪೆರಂಬೂರ್, ಗುಡೂರು, ವಿಜಯವಾಡ, ವಾರಂಗಲ್, ಬಲ್ಹರಷ್ಹಾ, ನಾಗ್ಪುರ, ಇಟಾರ್ಸಿ, ಜಬ್ಬಲಪುರ, ಸತ್ನಾ, ಪ್ರಯಾಗ ರಾಜ್‌ ಛೋಕಿ, ದೀನ-ದಯಾಳ-ಉಪಾದ್ಯಯ, ಬಕ್ಸರ್, ಆರಾ ಜಂ ಈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಈ ವಿಶೇಷ ರೈಲು (1) ಎಸಿ ಟು ಟೈಯರ್ ಬೋಗಿ,  (1) ಎಸಿ ತ್ರಿ ಟೈಯರ್ ಬೋಗಿ, (15) ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು, (2) ಜನರಲ್‌ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು (2) ದಿವ್ಯಾಂಗಸ್ನೇಹಿ ಕಂಪಾರ್ಟ್‌ಮೆಂಟ್‌ಗಳಿಂದ ಕೂಡಿದ ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಇರಲಿವೆ.

ಪ್ರಯಾಣಿಕರಿಗೆ ಈ ವಿಶೇಷ ರೈಲುಗಳ ಎಸಿ ಬೋಗಿಗಳಲ್ಲಿ ಬೆಡ್‌ ಶೀಟ್‌ ಮತ್ತು ಹೊದಿಕೆಗಳನ್ನು ಒದಗಿಸಲಾಗುವುದಿಲ್ಲ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X