ರಾಯಚೂರು | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ: ಜಯಣ್ಣ

Date:

Advertisements

ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯಾನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ರಾಯಚೂರು ನಗರಸಭೆ ಸದಸ್ಯ ಜಯಣ್ಣ ಹೇಳಿದ್ದಾರೆ.

ರಾಯಚೂರಿನಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕಾರ್ಯಕರ್ತರ ಸಮಾವೇಶ ಮತ್ತು ವಿಜ್ಞಾನ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. “ಅನೇಕ ಮೌಢ್ಯಗಳ ವಿರುದ್ಧ ಸವಾಲು ಹಾಕಿ ವೇದಿಕೆಯು ಹೋರಾಟ ಮಾಡುತ್ತಿದೆ. ಜನರಲ್ಲಿ ವಿಜ್ಞಾನದ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದೆ” ಎಂದು ಹೇಳಿದರು.

“ಇಂದಿನ ಸರ್ಕಾರ ಶಾಲೆಗಳ ಸ್ಥಿತಿಗತಿಯ ಬಗ್ಗೆ ಚಿಂತನೆ ನಡೆಸುವಂತೆ ಗಮನ ಸೆಳೆಯಲು ಭಾರತ ಜ್ಞಾನ ವಿಜ್ಞಾನ ಸಮಿತಿ ಆಲೋಚಿಸುವ ಅಗತ್ಯವಿದೆ. ಸರ್ಕಾರಿ ಶಾಲೆಗಳು ಬಡ ಮಕ್ಕಳ ವಿದ್ಯಾರ್ಜನೆ ಕೇಂದ್ರಗಳಾಗಿವೆ. ಈ ಶಾಲೆಗಳ ಸಂರಕ್ಷಣೆ ಬಹುಸಂಖ್ಯಾತ ಜನರ ಅಭ್ಯಾಸಕ್ಕೆ ಪೂರಕವಾಗಿವೆ. ಆದರೆ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ಗಂಭೀರವಾಗುತ್ತಿದೆ. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಶಾಲೆಗಳಿಗೆ ಹೊಸ ಚೈತನ್ಯ ನೀಡುವ ಮತ್ತು ಸಮಗ್ರ ಅಭಿವೃದ್ಧಿಗೆ ಆಂದೋಲನ ನಡೆಸುವ ಮಹತ್ವದ ನಿರ್ಧಾರಕ್ಕೆ ಸಂಬಂಧಿಸಿದಂತೆ ಚಿಂತನೆ ನಡೆಸಬೇಕಾಗಿದೆ” ಎಂದರು.

Advertisements

“ತರಗತಿಯೇ ಇಲ್ಲದ ಪರಿಸ್ಥಿತಿಯಲ್ಲಿ ವಿಜ್ಞಾನದ ಬೋಧನೆ ಎಲ್ಲಿ ನಡೆಯಲಿದೆ ಎನ್ನುವ ಪ್ರಶ್ನೆ ನಮ್ಮನ್ನು ಕಾಡುವ ಸಂದಿಗ್ದತೆಯಲ್ಲಿದ್ದೇವೆ. ಈ ಹಿನ್ನೆಲೆಯಲ್ಲಿ ಸಮಿತಿಯು ತನ್ನ ವೈಜ್ಞಾನಿಕ ಚಟುವಟಿಕೆಗಳೊಂದಿಗೆ ಸರ್ಕಾರಿ ಶಾಲೆಗಳ ಉಳಿಸುವ ಆಂದೋಲನಕ್ಕೂ ಬೆನ್ನೆಲುಬಾಗುವ ಅಗತ್ಯವಿದೆ” ಎಂದು ಹೇಳಿದರು.

ವೇದಿಕೆಯ ಭೀಮರೆಡ್ಡಿ ಮಾತನಾಡಿ, “ಹಲವು ವರ್ಷಗಳಿಂದ ವೈವಿಧ್ಯಮಯ ಹೋರಾಟಗಳ ಮೂಲಕ ಜನರ ಮಧ್ಯೆ ಮೌಢ್ಯಗಳ ಅಂಧಕಾರ ತೊಲಗಿಸಿ, ವಿಜ್ಞಾನ ಚಿಂತನೆಗೆ ಚಾಲನೆ ನೀಡುವ ಕೆಲಸವನ್ನು ವೇದಿಕೆ ಮಾಡಿದೆ. ಹೊಸ ಆವಿಷ್ಕಾರದೊಂದಿಗೆ ಜನಜಾಗೃತಿ ಹೋರಾಟಗಳನ್ನು ಮತ್ತಷ್ಟು ತೀವ್ರ ಗೊಳಿಸುವ ಹೊಸ ನಾಯಕತ್ವ ಅಗತ್ಯವಾಗಿದೆ. ಹಿನ್ನೆಲೆಯಲ್ಲಿ ಹೆಚ್ಚಿನ ವೈಜ್ಞಾನಿಕ ಚಿಂತಕರು ಆಧುನಿಕ ಆಲೋಚನೆಯ ವಿಚಾರವಾದಿಗಳು, ಈ ವೇದಿಕೆಯೊಂದಿಗೆ ತಮ್ಮನ್ನು ಗುರುತಿಸಿಕೊಂಡು ಸಮಾಜದಲ್ಲಿ ಮೌಢ್ಯದ ವಿರುದ್ಧ ವಿಜ್ಞಾನ ಚಳುವಳಿಗೆ ಸಶಕ್ತ ಗೊಳಿಸಲು ಮುಂದಾಗಬೇಕಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಎಂ.ರವಿ, ಜಯತೀರ್ಥ ಸೇರಿದಂತೆ ಹಲವರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X