ಅರಣ್ಯಾಧಿಕಾರಿಗಳ ವಶಕ್ಕೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

Date:

Advertisements

ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ ಅವರನ್ನು ವಶಕ್ಕೆ ಪಡೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ‘ಯಾರೇ ತಪ್ಪು ಮಾಡಿದರೂ ಶಿಕ್ಷೆಯಗುತ್ತದೆ’ ಎಂದಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಜಯಮ್ಮ ಎಂಬವರಿಗೆ ಸೇರಿದ ಸರ್ಕಾರಿ ಗೋಮಾಳ ಜಮೀನನ್ನು ವಿಕ್ರಮ್ ಸಿಂಹ ಗುತ್ತಿಗೆಗೆ ಪಡೆದುಕೊಂಡಿದ್ದರು. ಜಮೀನಿನ ಪಕ್ಕದಲ್ಲಿದ್ದ ಸರ್ಕಾರಿ ಭುಮಿಯಲ್ಲಿನ ಬೆಲೆ ಬಾಳುವ ಸುಮಾರು 126 ಮರ ಕಡಿದು ಸಾಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೇಲೂರು ತಹಶೀಲ್ದಾರ್ ಮಮತಾ ಅವರು ಸ್ಥಳಕ್ಕೆ ಭೇಟಿ ನೀಡಿ ಮರ ಕಡಿಯುವುದನ್ನು ತಡೆದಿದ್ದರು. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ದೌಡಾಯಿಸಿದ ಅರಣ್ಯಾಧಿಕಾರಿಗಳು ಎರಡು ಹಿಟಾಚಿ, ಎರಡು ಪವರ್ ಚೈಣ್, ಒಂದು ಟ್ರೈಲರ್ ಯಂತ್ರಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದರು.

Advertisements

ಪ್ರಕರಣದಲ್ಲಿ ವಿಕ್ರಮ್ ಸಿಂಹ ಅವರೇ ಮುಖ್ಯ ಆರೋಪಿಯೆಂದು ಪರಿಗಣಿಸಿದ್ದ ಅಧಿಕಾರಿಗಳು ಮತ್ತು ಪೊಲೀಸರು ಡಿಸೆಂಬರ್ 25ರಂದು ವಿಕ್ರಂ ಅವರ ಮನೆಗೆ ಭೇಟಿ ನೀಡಿದ್ದರು. ಆದರೆ, ವಿಕ್ರಂ ಪರಾರಿಯಾಗಿದ್ದರು. ಇದೀಗ, ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

“ಅರಣ್ಯ ಸಂಪತ್ತನ್ನು ನಾಶಪಡಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗುತ್ತದೆ. ಸರ್ಕಾರಿ ಜಾಗದಲ್ಲೇ ಆಗಲಿ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೇ ಅಕ್ರಮವಾಗಿ ಮರ ಕಡಿಯುವುದು ಅಪರಾಧ” ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X