ಮುದ್ದೇಬಿಹಾಳ | ಅಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ; ಗ್ರಾಮಸ್ಥರಿಂದ ಪ್ರತಿಭಟನೆ

Date:

Advertisements

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ, ನೆರಬೆಂಚಿ ಹಾಗೂ ಆಲೂರ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಅಬಕಾರಿ ಅಧಿಕಾರಿ ಹೊಸಮನಿ ಅವರಿಗೆ ಮನವಿ ಸಲ್ಲಿಸಿದರು.

ಕಿರಾಣಿ ಅಂಗಡಿ, ಪಾನ್ ಶಾಪ್ ಮತ್ತು 258 ಅಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದಾರೆ. ಊರಿನ ಯುವಕರು, ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗಿದ್ದಾರೆ. ಮದ್ಯ ಅಕ್ರಮ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನಡೆಸಿದರು.

‘ಕುಡಿತದ ದಾಸರಾಗಿರುವ ಪುರುಷರಿಂದ ಮನೆಯ ನೆಮ್ಮದಿ ಹಾಳಾಗುತ್ತಿದೆ. ಮನೆಯಲ್ಲಿ ಸಣ್ಣಪುಟ್ಟ ಖರ್ಚುಗಳಿಗೆಂದು ತೆಗೆದಿಟ್ಟಿರುವ ಹಣವನ್ನು ತೆಗೆದುಕೊಂಡು ಹೋಗಿ ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕಾದರೆ ಮದ್ಯ ಮಾರಾಟ ನಿಯಂತ್ರಿಸಬೇಕು. ಇಲ್ಲದಿದ್ದರೆ ನಮ್ಮ ಹೆಣಗಳು ಪೊಲೀಸ್ ಠಾಣೆಗೆ ಬರುತ್ತವೆ’ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

Advertisements
WhatsApp Image 2024 08 08 at 5.54.47 PM 1

ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಅಬಕಾರಿ ಅಧಿಕಾರಿ ಹೊಸಮನಿ, “ಮದ್ಯ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗಿದೆ. ಗ್ರಾಮಸ್ಥರ ಹೇಳಿಕೆಯಂತೆ ಇನ್ನೂ ಮುಂದುವರೆದಿದ್ದರೆ ಅಂತವರನ್ನು ವಶಕ್ಕೆ ಪಡೆದು ನೋಟಿಸ್ ನೀಡಿ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಈ ಸಂದರ್ಭದಲ್ಲಿ ಸಂಗನಗೌಡ ಅವರ ಪಾಟೀಲ್, ಶಾಂತಗೌಡ ನಾಡಗೌಡ, ದ್ಯಾವಣ್ಣ ಹಿರೇಕುರುಬರ, ಬಾಲಪ್ಪ ಶಂಕಪ್ಪ ತಳವಾರ, ಸಂಗಣ್ಣ ಭೋಯೇರ, ಆರೊ ಅಶೋಕ ಹಗರಗುಂಡ, ಶರಣಗೌಡ ಪಾಟೀಲ, ಮಲಕಾಜಪ್ಪ ಕಡಿ, ಅಂಬ್ರಪ್ಪ ಕೋಳೂರು, ಯಮನಪ್ಪ ತಳವಾರ, ಯಲ್ಲಪ್ಪ ಕರಡಿ, ಸಂಗಮ್ಮ ಸಾತಿಹಾಳ, ಅಮ್ಮಕ್ಕ ಖಾನಾಪೂರ, ದೇವಮ್ಮ ತಳವಾರ ಇದ್ದರು.

ಅಪರಾಧ ವಿಭಾಗದ ಆರ್.ಎಲ್.ಮನ್ನಾಭಾಯಿ, ಎಎಸ್‌ಐ ಎ.ವೈ.ಸಾಲಿ, ಪೊಲೀಸ್ ಸಿಬ್ಬಂದಿ ತ ಮಲ್ಲಿಕಾರ್ಜುನ ಬೋಳರೆಡ್ಡಿ ಭದ್ರತೆ ಒದಗಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X