ಮುಧೋಳ | ಘಟಪ್ರಭಾ ನದಿಯಿಂದಾಗಿ ಸಂತ್ರಸ್ತರಾದ ರೈತರ ಪರ ನಿಲ್ಲುತ್ತೇನೆ : ಸಚಿವ ಆರ್ ಬಿ ತಿಮ್ಮಾಪುರ ಭರವಸೆ

Date:

Advertisements

ಪ್ರತಿಭಟನೆಯಿಂದ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ. ಆಲಮಟ್ಟಿ ಹಿನ್ನೀರು ಹಾಗೂ ಘಟಪ್ರಭಾ ನದಿಯಿಂದ ರೈತರಿಗೆ ಉಂಟಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂತ್ರಸ್ತರ ಪರ ನಿಲ್ಲುತ್ತೇನೆ ಎಂದು ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ಆಲಮಟ್ಟಿ ಹಿನ್ನೀರು ಹಾಗೂ ಘಟಪ್ರಭಾ ನದಿಯಿಂದ ಹಾನಿಗೀಡಾದ ರೈತ ಮುಖಂಡರೊಂದಿಗೆ ಸಂವಾದ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಸಚಿವರು, “ಸರ್ಕಾರದ ಮಟ್ಟದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆಯಾಗಬೇಕು, ಪರಿಸ್ಥಿತಿಯ ಸಾಧಕ-ಬಾಧಕಗಳನ್ನು ವೈಜ್ಞಾನಿಕವಾಗಿ ನಿರ್ಣಯಿಸಿ ಮುಖ್ಯಮಂತ್ರಿಗೆ ವರದಿ ನೀಡಿ ಪರಿಹಾರ ಕಂಡುಕೊಳ್ಳಬೇಕಿದೆ” ಎಂದು ತಿಳಿಸಿದರು.

Advertisements
WhatsApp Image 2024 08 16 at 4.24.42 PM

ರೈತರು ಮತ್ತು ಅತಿವೃಷ್ಟಿ ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಾವಾಗಲೀ ಸಂಸದ ಗೋವಿಂದ ಕಾರಜೋಳವಾಗಲೀ ಏಕಾಂಗಿಯಾಗಿ ಪರಿಹರಿಸಲು ಸಾಧ್ಯವಿಲ್ಲ.  2019ರ ಪ್ರವಾಹದ ಸಮಯದಲ್ಲಿ ಅವರ ಹಕ್ಕುಗಳಿಗಾಗಿ ಹೋರಾಡಿದ ರೈತನಾಗಿ ತಮ್ಮ ಸ್ವಂತ ಅನುಭವದಿಂದ ರೈತರಿಗೆ ಸಹಾಯ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಲು ಅವರು ಬದ್ಧರಾಗಿದ್ದಾರೆ. ಈ ಹೋರಾಟದಲ್ಲಿ ಸಂತ್ರಸ್ತರ ಪರ ನಿಲ್ಲುತ್ತೇನೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ ಸಚಿವ ತಿಮ್ಮಾಪುರ, ಪರಿಹಾರ ಕಂಡುಕೊಳ್ಳಲು ಪ್ರತಿಭಟನೆಯಿಂದ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆಯಾಗಬೇಕು. ಪರಿಸ್ಥಿತಿಯ ಸಾಧಕ-ಬಾಧಕಗಳನ್ನು ವೈಜ್ಞಾನಿಕವಾಗಿ ನಿರ್ಣಯಿಸಿ ಮುಖ್ಯಮಂತ್ರಿಗೆ ವರದಿ ನೀಡಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

ಸಭೆಯಲ್ಲಿ ರೈತ ಮುಖಂಡ ಅಶೋಕ ಪಾಟೀಲ ಮಾತನಾಡಿ, ಕಬ್ಬಿಗೆ ಎಕರೆಗೆ 1 ಲಕ್ಷ ಹಾಗೂ ಇತರೆ ಬೆಳೆಗಳಿಗೆ 50 ಸಾವಿರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು.  ಶಾಶ್ವತ ಪರಿಹಾರ ಕಲ್ಪಿಸಬೇಕು. ತಾಲೂಕಿನಲ್ಲಿ 77 ಕಿ.ಮೀ ನದಿ ವ್ಯಾಪ್ತಿಯಿದೆ.  ಚಿಂಚನಖಂಡಿ ಮತ್ತು ಯಾದವಾಡದಲ್ಲಿ ಹೆಚ್ಚು ನೀರು ಹರಿಯುತ್ತದೆ.  ಕಾತರಕಿ ಬಳಿ ಹೆಚ್ಚಿನ ನೀರು ಹರಿಯುತ್ತದೆ.   ಆದರೆ ಸೇತುವೆ ಇದ್ಯಾವುದಕ್ಕೂ ಆಗಿಲ್ಲ, ವಿಸ್ತರಣೆ ಮಾಡಬೇಕು. ಯಾದವಾಡ ಸೇತುವೆ ಹಾಗೂ ಚಿಂಚನಖಂಡಿ ನದಿಯಲ್ಲಿ ಹೂಳು ತುಂಬಿದ್ದು, ಅವುಗಳನ್ನು ತೆಗೆದು ಒತ್ತುವರಿ ಪ್ರದೇಶವೆಂದು ಘೋಷಿಸಬೇಕು ಎಂದು ಸಮಸ್ಯೆಗಳ ಪಟ್ಟಿಯನ್ನು ಹಾಕಿ ಸಭೆಯ ಗಮನ ಸೆಳೆದರು.

ತಿಮ್ಮಾಪುರ

ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕಾರ, ತಹಶೀಲ್ದಾರ್ ವಿನೋದ ಹತಳ್ಳಿ, ಡಿವೈಎಸ್ಪಿ ಶಾಂತವೀರ, ನೀರಾವರಿ ಇಲಾಖೆ ಹಾಗೂ ಹೆಸ್ಕಾಂ ಪ್ರತಿನಿಧಿಗಳು ಸೇರಿದಂತೆ  ಪ್ರಮುಖರು ಹಾಜರಿದ್ದರು.

ಪ್ರಮುಖರಾದ ಸ್ಥಳೀಯ ಮುಖಂಡರಾದ ದುಂಡಪ್ಪ ಯರಗಟ್ಟಿ, ಕಲ್ಮೇಶ ಹಣಗುಜಿ, ಉದಯ ಸರ್ವಾಡ, ಸಂಜಯ ನಾಯಿಕ, ರಾಜುಗೌಡ ಪಾಟೀಲ, ಬಸವಂತಪ್ಪ ಕಾಂಬಳೆ, ನಾಗೇಶ ಸೊರಗಾಂವಿ, ಮುತ್ತಪ್ಪ ಕೋಮಾರ, ಶುಭಾಸ ಶಿರಬೂರ, ದುಂಡಪ್ಪ ಲಿಂಗರಡ್ಡಿ, ಹಣಮಂತ ನಬಾಬ, ಎ.ಜಿ.ಪಾಟೀಲ, ಮುತ್ತಪ್ಪ ಕೋಮಾರ, ಮಹೇಶಗೌಡ ಪಾಟೀಲ,  ಅಪ್ಪಾ ಸಾಹೇಬ ಲಕ್ಕಂ, ವೆಂಕಣ್ಣ ಗಿಡ್ಡಪ್ಪನವರ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ತಿಳಿಸಿದರು.

ಈ ಪ್ರದೇಶದಲ್ಲಿ ಪದೇ ಪದೇ ಉಂಟಾಗುತ್ತಿರುವ ಪ್ರವಾಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಸಂತ್ರಸ್ತ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X