ಮೂಡಿಗೆರೆ l ಆಕಸ್ಮಿಕ ಬೆಂಕಿಗೆ ಗುಡಿಸಲು, ಪಠ್ಯ ಪುಸ್ತಕ ಭಸ್ಮ; ಕುಟುಂಬಸ್ಥರ ಬದುಕು ಅತಂತ್ರ

Date:

Advertisements

ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆಸರೆಯಾಗಿದ್ದ ಗುಡಿಸಲಿಗೇ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳ ಪಠ್ಯ ಪುಸ್ತಕಗಳು ಕೂಡ ಸುಟ್ಟು ಭಸ್ಮವಾಗಿದೆ.

ಸುಮಾರು ವರ್ಷದಿಂದ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಸಮುದಾಯದಕ್ಕೆ ಸೇರಿದ ಜ್ಯೋತಿ ಮತ್ತು ಚಂದ್ರು ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದು, ತಮ್ಮ ಇಬ್ಬರು ಮಕ್ಕಳೊಂದಿಗೆ ಆ ಗುಡಿಸಲಿನಲ್ಲಿಯೇ ಜೀವನ ಸಾಗಿಸುತ್ತಿದ್ದರು. ಇದೀಗ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಕುಟುಂಬಸ್ಥರ ಬದುಕು ಅತಂತ್ರವಾಗಿದೆ.

Screenshot 2024 11 27 00 00 05 44 7352322957d4404136654ef4adb64504

ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಚಂದ್ರು ದಂಪತಿ ಮನೆಯಿಲ್ಲದೆ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು.

Advertisements

ಚಂದ್ರು ದಂಪತಿ ಕಷ್ಟಪಟ್ಟು ಕೂಲಿ ಕೆಲಸ ಮಾಡಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಹಾಗೆಯೇ ಇಬ್ಬರ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು. ಈ ಕುಟುಂಬದ ದಂಪತಿ ಎಂದಿನಂತೆ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದರು. ಇಬ್ಬರು ಮಕ್ಕಳು ಶಾಲೆಗೆ ತೆರಳಿದ್ದರು. ಇದೇ ತಿಂಗಳು 20ರಂದು ಕೆಲಸಕ್ಕೆ ಹೋಗಿರುವ ಸಮಯದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿದೆ. 

Screenshot 2024 11 26 23 54 03 54 40deb401b9ffe8e1df2f1cc5ba480b12

ಸಂತ್ರಸ್ತ ದಂಪತಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದ ಸುತ್ತಮುತ್ತಲಿನ ಜನರು ಗಮನಿಸಿ ಕಿರುಚಾಡಿ ಸ್ವಲ್ಪ ಮಂದಿ ಬಂದು ಬೆಂಕಿಯನ್ನು ನಂದಿಸಿದ್ದಾರೆ. ತೋಟಕ್ಕೆ ಹೋಗಿದ್ದ ಕುಟುಂಬಸ್ಥರು ಸ್ಥಳಕ್ಕೆ ಬಂದು ನೋಡಿದಾಗ ಬೆಂಕಿಯಿಂದ ಗುಡಿಸಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಕ್ಕಳು ಓದುತಿದ್ದ ಶಾಲೆಯ ಪಠ್ಯಪುಸ್ತಕಗಳು ಬೆಂಕಿಗೆ ಆಹುತಿಯಾಗಿವೆ” ಎಂದು ಅವಲತ್ತುಕೊಂಡಿದ್ದಾರೆ.

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ. ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಕ್ಕಳ ಬದುಕು ಈಗ ಅತಂತ್ರವಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

“ಸಂಬಂಧಪಟ್ಟ ಅಧಿಕಾರಿಗಳು ಸಂತ್ರಸ್ತ ದಂಪತಿಯ ಸಮಸ್ಯೆಯನ್ನು ಆಲಿಸಿ, ಆದಷ್ಟು ಬೇಗ ಕುಟುಂಬದವರಿಗೆ ಪರಿಹಾರ ದೊರಕಿಸಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X