ಮುಳಬಾಗಿಲು | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬಗಳ ಶಾಂತಿಯುತ ಆಚರಣೆಗೆ ಮನವಿ

Date:

Advertisements

ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಸಮುದಾಯಗಳ ಮುಖಂಡರ ನೇತೃತ್ವದಲ್ಲಿ ಮುಳಬಾಗಿಲು ತಾಲೂಕು ಆಡಳಿತ ಶಾಂತಿ ಸಭೆ ನಡೆಸಿತು.

ತಾಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಎರಡು ಸಮುದಾಯಗಳ ಮುಖಂಡರೊಂದಿಗೆ ನಡೆದ ಶಾಂತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ರವಿಶಂಕರ್ ಮಾತನಾಡಿ, “ಹಬ್ಬ ಹರಿದಿನಗಳಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳುವುದು ಸಾರ್ವಜನಿಕರ ಆದ್ಯ ಕರ್ತವ್ಯ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯಿಂದ ಆಚರಿಸಿಕೊಳ್ಳಲು ಎರಡು ಸಮುದಾಯದ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದರು.

ಗಣೇಶ ಪ್ರತಿಷ್ಠಾಪನೆ ಆಯೋಜಿಸುವ ಆಯೋಜಕರು ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದಿರಬೇಕು, ಅನುಮತಿ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಬಾರದು. ನಗರ ವ್ಯಾಪ್ತಿಯಲ್ಲಿ ಅನುಮತಿ ಪಡೆಯಲು ನಗರಸಭೆಯಲ್ಲಿ ಅವಕಾಶ ಕಲ್ಪಿಸಿದೆ. ಗ್ರಾಮೀಣ ಭಾಗದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಂದ ಅನುಮತಿ ಪಡೆದುಕೊಳ್ಳಲು ತಿಳಿಸಿದರು.

Advertisements

“ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಡಿಜೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗಾಗಿ ಡಿಜೆ ಬಳಸಬಾರದು. ಮೂರ್ತಿಗಳ ವಿಸರ್ಜನೆಗೆ ನಗರಸಭೆ ಸೂಚಿಸಿರುವ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ಯುವಕರು ಮಧ್ಯ ಸೇವಿಸಿ ಗಲಾಟೆ ಇಲ್ಲವೇ ಸಾರ್ವಜನಿಕರಿಗೆ ತೊಂದರೆ ಮಾಡಿದರೆ ಆಯೋಜಕರ ಮೇಲೆ ಪೊಲೀಸ್ ಇಲಾಖೆಯಿಂದ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: ಮುಳಬಾಗಿಲು | ರೈತರ ಬೆಳೆಗಳಿಗೆ ಲಾಭದಾಯಕ ಪರಿಹಾರ ನೀಡಲು ಕಿಸಾನ್‌ ಸಂಘ ಮನವಿ

ಸಭೆಯಲ್ಲಿ ತಹಸೀಲ್ದಾರ್ ವಿ.ಗೀತಾ, ಎಎಸ್ಪಿ ಮನೀಷಾ, ನಗರಸಭೆ ಪೌರಾಯುಕ್ತ ವಿ.ಶ್ರೀಧರ್, ಬೆಸ್ಕಾಂ ಎಇ ಶಿವಕುಮಾರ್, ವೃತ್ತ ನಿರೀಕ್ಷಕ ಕೆ.ಜಿ ಸತೀಶ್, ಪಿಎಸ್ ಐ ಗಳಾದ ಅಣ್ಣಯ್ಯ, ಅರುಣ್ ಗೌಡ ಪಾಟೀಲ್, ಮಮತಾ, ಮುಖಂಡರಾದ ಕೇಸರಿ ಶಂಕರ್, ರಿಯಾಜ್ ಅಹ್ಮದ್, ಮೊಹಮ್ಮದ್ ಜಬಿವುಲ್ಲಾ, ನಗರಸಭೆ ಸದ್ಯಸರುಗಳು, ಗಣೇಶಪಾಳ್ಯ ಕಿಟ್ಟ, ಬಂಗಾರಿ ಮಂಜು, ಲಯನ್ ಹರಿ, ಚಂದು, ಬಾಂಬ್ ನಯಾಜ್ ಸೇರಿದಂತೆ ಎರಡು ಸಮುದಾಯಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X