ಮುಳಬಾಗಿಲು | ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್‌: ಯಾರಿಗೂ ಹೇಳದಂತೆ ಬೆದರಿಕೆ

Date:

Advertisements

ಮುಳಬಾಗಿಲು ತಾಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿಗೆ ವಾರ್ಡನ್ ತಮ್ಮ ಸೊಂಟದ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವಿದ್ಯಾರ್ಥಿ ತಾಯಿ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ವಾರ್ಡನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಸೋಮವಾರ ಪೋಷಕರ ಸಭೆ ವೇಳೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ನೂರಾರು ಮಂದಿ ವಸತಿಶಾಲೆ ಬಳಿ ಜಮಾಯಿಸಿದ್ದರು. ಸ್ಥಳಕ್ಕೆ ಬಂದ ನಂಗಲಿ ಪೊಲೀಸರು ಜನರನ್ನು ಚದುರಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮಾಹಿತಿ ಪಡೆದರು.

6ನೇ ತರಗತಿ ವಿದ್ಯಾರ್ಥಿ ಎಸ್ ಅನಂತಪುರ ಗ್ರಾಮದ ಅಂಜನ್ ಕುಮಾರ್ ಮೇಲೆ ವಾರ್ಡನ್ ಮಹೇಶ್ ಹಲ್ಲೆ ನಡೆಸಿದ್ದಾರೆಂದು ವಿದ್ಯಾರ್ಥಿ ತಾಯಿ ಅಶ್ವಿನಿ ಆರೋಪ ಮಾಡಿದರು.

Advertisements

ಮೂಲತಃ ಕೋಲಾರ ತಾಲೂಕಿನ ಸೂಲೂರು ಗ್ರಾಮದ ಈ ವಿದ್ಯಾರ್ಥಿಯ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು. ನಂತರ ಆತ ತಾಯಿಯ ತವರೂರು ಎಸ್ ಅನಂತಪುರಕ್ಕೆ ತೆರಳಿದ್ದ. ನಂತರ ಆತನನ್ನು ಮೊರಾರ್ಜಿ ಶಾಲೆಗೆ ಸೇರಿಸಲಾಗಿತ್ತು.

“ವಸತಿ ನಿಲಯದಲ್ಲಿ ದೆವ್ವ ಇದೆ ಎಂದು ಸಹಪಾಠಿಗಳನ್ನು ಅಂಜನ್ ಹೆದರಿಸುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳು ಈ ವಿಷಯವನ್ನು ತನ್ನ ಗಮನಕ್ಕೆ ತಂದಿದ್ದರು” ಎಂದು ವಾರ್ಡನ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

“ಮಕ್ಕಳು ತುಂಟಾಟ ಮಾಡುವುದು ಸಹಜ. ಬುದ್ದಿವಾದ ಹೇಳಬೇಕಾದ ವಾರ್ಡನ್ ತಮ್ಮ ಸೊಂಟದ ಬೆಲ್ಟ್ ತೆಗೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಜರ್ಜರಿತಗೊಂಡ ಮಗ ಸ್ಥಳದಲ್ಲೇ ಕುಸಿದು ಬಿದ್ದ ನಂತರವೂ ವಾರ್ಡನ್ ಒದ್ದಿದ್ದಾರೆ” ಎಂದು ವಿದ್ಯಾರ್ಥಿ ತಾಯಿ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | 1980ರ ರೈತ ಬಂಡಾಯ ಸ್ಮರಣಾರ್ಥ ಸುರಪುರದಲ್ಲಿ ಹುತಾತ್ಮ ದಿನಾಚರಣೆ

“ಅಂಜನ್ ಕುಮಾರ್ ಮೇಲೆ ತಾನು ನಡೆಸಿದ ಹಲ್ಲೆ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ವಾರ್ಡನ್ ಇತರ ವಿದ್ಯಾರ್ಥಿಗಳಿಳಿಗೂ ಬೆದರಿಕೆ ಹಾಕಿದ್ದರು. ಹೀಗಾಗಿ, ಈ ಘಟನೆ ನಡೆದು ಮೂರ್ನಾಲ್ಕು ದಿನಗಳಾದರೂ ಯಾರಿಗೂ ಗೊತ್ತಿರಲಿಲ್ಲ” ಎಂದರು.

“ಸೋಮವಾರ ಶಾಲೆಯಲ್ಲಿ ಪೋಷಕರ ಸಭೆಗೆ ಬಂದಾಗ ತನ್ನ ಮಗನ ಮೇಲೆ ಹಲ್ಲೆ ನಡೆದಿರುವ ಸಂಗತಿ ಗೊತ್ತಾಯಿತು. ಈ ಬಗ್ಗೆ ವಾರ್ಡನ್ ಮಹೇಶ್ ಅವರನ್ನು ವಿಚಾರಿಸಿದೆವು. ‘ಶಾಲೆಯಲ್ಲಿ ದೆವ್ವ ಇದೆ ಎಂದು ಇತರ ವಿದ್ಯಾರ್ಥಿಗಳನ್ನು ಹೆದರಿಸುತ್ತಿದ್ದ. ಹೀಗಾಗಿ ಹೊಡೆದೆ’ ಎಂದು ಅವರು ತಮ್ಮ ಕೃತ್ಯ ಸಮರ್ಥಿಸಿಕೊಂಡರು. ಅವರಿಗೆ ಹಲ್ಲೆ ನಡೆಸಿದ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ” ಎಂದು ವಿದ್ಯಾರ್ಥಿ ತಾಯಿ ಅಶ್ವಿನಿ ಅವಲತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X