ಮುಂಡಗೋಡು | ಮಹಿಳೆ ನಾಪತ್ತೆ: ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ

Date:

Advertisements

ಬೆಳಗಾವಿ ತಾಲೂಕಿನ ಉಪ್ಪಾರಗಲ್ಲಿ ಮೂಲದ ಹಾಗೂ ಪ್ರಸ್ತುತ ಮುಂಡಗೋಡ ನಂದೀಶ್ವರನಗರದಲ್ಲಿ ವಾಸವಾಗಿರುವ ಅದಿತಿ ಆನಂದ ಬಸ್ತಾವಾಡ(29 ವರ್ಷ) ಅವರು ಮಾರ್ಚ್ 2025ರ 7ರಂದು ಕಾಣೆಯಾಗಿದ್ದು, ಇವರ ಗುರುತು ಕಂಡುಬಂದಲ್ಲಿ ಮುಂಡಗೋಡು ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಮನೆಯವರು ತಮ್ಮ ಹೋಟೆಲ್‌ಗೆ ತೆರಳಿದಾಗ, ಮನೆಯಲ್ಲಿ ಅಡುಗೆ ಮಾಡಿಕೊಂಡು ಹೋಟೆಲ್‌ಗೆ ತಂದು ಕೊಡುತ್ತೇನೆಂದು ಹೇಳಿ ಹೋದ ಮಹಿಳೆ ಸಂಜೆ 4 ಗಂಟೆಯಾದರೂ ಹೋಟೆಲ್‌ಗೆ ಬಾರದೇ ಇರುವುದನ್ನು ಕಂಡು ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗ ಅಲ್ಲಿಗೂ ಹೋಗದಿರುವುದು ತಿಳಿದುಬಂದಿದೆ. ಮನೆಯಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮಹಿಳೆಯ ವಿವರಗಳು:
ಚಹರೆ: ಗೋಧಿ ಮೈ ಬಣ್ಣ
ಮೈಕಟ್ಟು: ಸಾಧಾರಣ
ಮುಖ : ಉದ್ದವಾದ ಮುಖ
ಉಡುಪು : ಕಪ್ಪು-ಬಿಳಿ ಮಿಶ್ರಿತ ಟೀ ಶರ್ಟ್ ಹಾಗೂ ನೈಟ್ ಪ್ಯಾಂಟ್
ಭಾಷೆ : ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಲೆಮಾರಿಗಳ ಕಲಾಪ್ರಕಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಿದೆ: ಡಾ. ಎಸ್ ಬಾಲಾಜಿ

ಸಾರ್ವಜನಿಕರಿಗೆ ಕಾಣಿಸಿಕೊಂಡಲ್ಲಿ ಮುಂಡಗೋಡ ಪೊಲೀಸ್ ಠಾಣೆ(ದೂ.ಸಂ: 08301-222211), ಎಸ್‌ಡಿಪಿಒ (08384-226424), ಡಿಪಿಒ(08382-226233), ರೇಂಜ್ ಕಚೇರಿ (82422-20501)ಯನ್ನು ಸಂಪರ್ಕಿಸುವಂತೆ ಮುಂಡಗೋಡ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X