ಹಾವೇರಿ | ತಂಗಳು ಆಹಾರ ನೀಡುತ್ತಿದ್ದಾರೆ; ವಸತಿ ಶಾಲೆ ವಿದ್ಯಾರ್ಥಿಗಳ ಆರೋಪ

Date:

Advertisements

ವಸತಿ ಶಾಲೆಯಲ್ಲಿ ಬಿಸಿಯೂಟ ನೀಡುತ್ತಿಲ್ಲ. ತಂಗಳು ಆಹಾರ ನೀಡುತ್ತಾರೆ. ಬೇಡವೆಂದರೂ ಬಲವಂತವಾಗಿ ತಿನ್ನಲು ಕೊಡುತ್ತಾರೆ ಎಂದು ವಸತಿ ಶಾಲೆಯ ಮಕ್ಕಳು ಆರೋಪಿಸಿದ್ದಾರೆ.

ಹಾವೇರಿಯ ಕರ್ಜಗಿ-ಗಂಜೀಗಟ್ಟೆ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಅವರು ಶುಕ್ರವಾರ ಭೇಟಿ ನೀಡಿದ್ದರು. ಈ ವೇಳೆ, ವಿದ್ಯಾರ್ಥಿಗಳು ಶಾಲೆಯ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಶಾಲೆಯ ಅವ್ಯವಸ್ಥೆಯನ್ನು ಗಮನಿಸಿದ ಶೇಖರಗೌಡ ಶಾಲೆಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶೇಖರಗೌಡ ಅವರ ಎದುರು ತಮ್ಮ ಅಳಲು ತೋಡಿಕೊಂಡಿರುವ ವಿದ್ಯಾರ್ಥಿಗಳು, “ರಾತ್ರಿ ಉಳಿದ ಆಹಾರವನ್ನು ಬೆಳಿಗ್ಗೆ ಉಪಹಾರಕ್ಕೆ ಮತ್ತು ಬೆಳಗಿನ ಆಹಾರವಮ್ಮಿ ಮಧ್ಯಾಹ್ನದ ಊಟಕ್ಕೆ ಕೊಡುತ್ತಾರೆ. ಕೊಟ್ಟೆ ತುಂಬಾ ಕೂಡ ಊಟ ಕೊಡುತ್ತಿಲ್ಲ. ತಂಗಳು ಆಹಾರವನ್ನೇ ಬಲವಂತವಾಗಿ ತಿನ್ನಲು ಕೊಡುತ್ತಾರೆ” ಎಂದು ಆರೋಪಿಸಿದ್ದಾರೆ.

Advertisements

ಅಲ್ಲದೆ, ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಒದಗಿಸಿರುವ ನೋಟ್ ಪುಸ್ತಕ ಮತ್ತು ಪೆನ್‌ಗಳನ್ಣೂ ಕೂಡ ವಿತರಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮಕ್ಕಳ ಆರೋಪಗಳನ್ನು ಗಣನೆಗೆ ತೆಗೆದುಕೊಂಡಿರುವ ಸೇಖರಗೌಡ, ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಶಾಲೆಯ ಪ್ರಾಚಾರ್ಯ ಮತ್ತು ವಾರ್ಡನ್‌ಗಳಿಗೆ ಸಮನ್ಸ್‌ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X