ಚಿಕ್ಕಬಳ್ಳಾಪುರ | ಬಿಲ್‌ ಪಾವತಿಸದಿದ್ದಕ್ಕೆ ಕೊಲೆ; ಇಬ್ಬರ ಬಂಧನ

Date:

Advertisements

ಕೊಲೆ ಪತ್ತೆಯಾದ 6 ಗಂಟೆಗಳಲ್ಲಿ ಕೊಲೆ ಆರೋಪಿಗಳ ಪತ್ತೆ

ಹಾರೋಬಂಡೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಪುತ್ರ ಮಾರುತೇಶ್‌ ಬಿನ್‌ ನಾಗರೆಡ್ಡಿ ಕೊಲೆ ಮಾಡಿದ್ದ‌ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾರೋಬಂಡೆ ಗ್ರಾಮದ ವಿನೋದ್‌ ಗೌಡ(22) ಬಿನ್‌ ಲೇಟ್‌ ದೇವರಾಜು, ಶಿಡ್ಲಘಟ್ಟ ತಾಲೂಕಿನ ಕೆ.ಜಿ.ಪುರ ಗ್ರಾಮದ ಅಭಿಷೇಕ್‌ ಬಿನ್‌ ಹನುಮಂತಪ್ಪ(19) ಕೊಲೆ ಮಾಡಿರುವ ಆರೋಪಿಗಳು.

ಕೊಲೆಗೆ ಕಾರಣ : ಮಾರುತೇಶ್‌ ಮತ್ತು ವಿನೋದ್‌ ಗೌಡ ಈ ಹಿಂದೆ‌ ಬಾರ್‌ ಒಂದರಲ್ಲಿ ಮದ್ಯ ಸೇವನೆ ಮಾಡಿದ್ದು, ಮಾರುತೇಶ್ ಅದರ ಬಿಲ್‌ ಪಾವತಿ ಮಾಡಿರಲಿಲ್ಲ. ಇದಾದ ಬಳಿಕ ಡಿ.29ರಂದು ರಾತ್ರಿ 8.30 ಗಂಟೆಗೆ ಹಾರೋಬಂಡೆ ಗ್ರಾಮದ ಖಾಸಗಿ ಬಡಾವಣೆಯೊಂದರಲ್ಲಿ ಮದ್ಯ ಸೇವನೆ ಮಾಡಿ ಹಳೆಯ ವಿಚಾರಕ್ಕೆ ಜಗಳ ಶುರುವಾಗಿತ್ತು. ಈ ವೇಳೆ ಆರೋಪಿಗಳು ಬಿಯರ್‌ ಬಾಟಲಿಯಿಂದ ಮಾರುತೇಶ್‌ ತಲೆ ಮತ್ತು ಕುತ್ತಿಗೆಗೆ ಗಾಯಪಡಿಸಿದ್ದು, ಮಾರುತೇಶ್ ಸಾವನ್ನಪ್ಪಿರುತ್ತಾರೆ.

Advertisements

ಸದರಿ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರ ತಂಡ, ಪ್ರಕರಣ ವರದಿಯಾದ 6 ಗಂಟೆಗಳಲ್ಲಿ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X