ಪೆಹಲ್ಗಾಮ್ ಹತ್ಯಾಕಾಂಡ- ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

Date:

Advertisements

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅತ್ಯಂತ ಹೇಯ ಮತ್ತು ಹೀನ ಕೃತ್ಯವಾಗಿದ್ದು ಇದು ಸಮಸ್ತ ನಾಗರಿಕ ಸಮಾಜದ ಮೇಲೆ ನಡೆದ ದಾಳಿಯಾಗಿದೆ. ಈ ಕೃತ್ಯದ ಹಿಂದೆ ಯಾವುದೇ ಶಕ್ತಿ ಅಥವಾ ಅದೆಷ್ಟೇ ದೊಡ್ಡ ವ್ಯವಸ್ಥೆಗಳೇ ಇರಲಿ ಅವುಗಳ ವಿರುದ್ಧ ಕೇಂದ್ರ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಭಯೋತ್ಪಾದನಾ ಚಟುವಟಿಕೆಗಳಿಗೆ ಸುದೀರ್ಘ ಇತಿಹಾಸವಿದ್ದು ಜಾತಿ, ಧರ್ಮ, ದೇಶ, ಭಾಷೆಗಳ ಭೇದವಿಲ್ಲದೆ ಸಮಾಜದ ಎಲ್ಲರೂ ಇದಕ್ಕೆ ಬಲಿಪಶುಗಳಾಗಿದ್ದಾರೆ. ಹಾಗೆಯೇ, ಯಾವುದೇ ಭೇದವಿಲ್ಲದೆ ಇದರ ವಿರುದ್ಧ ಹೋರಾಡಿದ್ದಾರೆ. ಇಂಥ ಭಯೋತ್ಪಾದನಾ ಕೃತ್ಯಗಳಿಂದಾಗಿ ಸಮುದಾಯಗಳ ನಡುವೆ ಮತ್ತಷ್ಟು ಅಂತರ ಮೂಡಿ ಭಯೋತ್ಪಾದಕರ ಉದ್ದೇಶ ಈಡೇರದಂತೆ ರಾಜಕೀಯ ಧಾರ್ಮಿಕ ಮತ್ತು ಸಾಮಾಜಿಕ ವಲಯದಲ್ಲಿರುವ ಪ್ರಜ್ಞಾವಂತರು ಎಚ್ಚರಿಕೆ ವಹಿಸಬೇಕಿದೆ.

ಸಮಾಜ ವಿರೋಧಿ ಶಕ್ತಿಗಳು ವಿಜೃಂಭಿಸದಂತೆ ನೋಡಿಕೊಳ್ಳುವಲ್ಲಿ ಸಮುದಾಯಗಳು ಸಂಘಟಿತವಾದ ಕಾರ್ಯತಂತ್ರಗಳನ್ನು ಭವಿಷ್ಯದ ದೃಷ್ಟಿಯಿಂದ ರೂಪಿಸಿಕೊಳ್ಳಬೇಕಿದೆ. ಉಗ್ರವಾದಿಗಳಿಗೆ ಧರ್ಮ, ದೇಶ, ಭಾಷೆಗಳ ಹಂಗಿಲ್ಲ ಎನ್ನುವುದು ಈ ಪ್ರಕರಣ ಮತ್ತು ಹಿಂದಿನ ಹಲವು ಪ್ರಕರಣಗಳಲ್ಲಿ ಕಂಡುಬಂದಿದೆ. ಈ ಭೀಕರ ಹತ್ಯಾಕಾಂಡವನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಖಂಡಿಸುತ್ತದೆ ಮಾತ್ರವಲ್ಲ, ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ವಕ್ತಾರ ಮುಷ್ತಾಕ್ ಹೆನ್ನಾಬೈಲ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ..

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X