ಉಡುಪಿ‌ | ಮುಸ್ಲಿಂ ಬಾಂಧವ್ಯ ವೇದಿಕೆಯ ರಾಜ್ಯಧ್ಯಕ್ಷರಾಗಿ ಝಾಕಿರ್ ಹುಸೇನ್, ಕಾರ್ಯದರ್ಶಿಯಾಗಿ ರೆಹ್ಮತುಲ್ಲಾ ಆಯ್ಕೆ

Date:

Advertisements

2025-26 ನೇ ಸಾಲಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಝಾಕಿರ್ ಹುಸೇನ್ ಉಚ್ಚಿಲ್ಲ ಮತ್ತು ಕಾರ್ಯದರ್ಶಿಯಾಗಿ ರೆಹಮತುಲ್ಲಾ ದಾವಣಗೆರೆ ಆಯ್ಕೆಯಾಗಿದ್ದಾರೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಕಳೆದ ಮೂರು ವರ್ಷಗಳಿಂದ ರಾಜ್ಯಾದ್ಯಂತ ವ್ಯಾಪಕವಾದ ಸೌಹಾರ್ದ ಕಾರ್ಯಕ್ರಮಗಳ ಮೂಲಕ ದೊಡ್ಡಮಟ್ಟದಲ್ಲಿ ಸಾರ್ವಜನಿಕರ ಗಮನ ಸೆಳೆದಿದೆ. ರಾಜ್ಯದ ಪ್ರಮುಖ ಮಠಾಧೀಶರು, ವಿವಿಧ ಸಮುದಾಯದ ಮುಖಂಡರು ಮತ್ತು ಜಾತ್ಯತೀತ ರಾಜಕಾರಣಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಈ ವೇದಿಕೆಯು ರಾಜ್ಯದಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಸಮಾಜದ ಎಲ್ಲ ವರ್ಗದವರಿಗೆ ಪರಿಚಿತಗೊಂಡ ವೇದಿಕೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ರಾಜ್ಯದ ಮುಸ್ಲಿಂ ಲೇಖಕರು ಚಿಂತಕರು ಸಾಹಿತಿಗಳು ಸಾಧಕರು ಸೈನಿಕರು ಹಾಗೂ ನಿವ್ರತ್ತ ಸರ್ಕಾರಿ ಅಧಿಕಾರಿಗಳಿಂದ ಕೂಡಿದ ಅಪರೂಪದ ವಿಶಿಷ್ಟ ವೇದಿಕೆ ಇದು. ಜೂನ್ ತಿಂಗಳ 28ರಂದು ವಿಜಯಪುರದಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಸಂಘಟನೆಯ ಕೋರ್ ಕಮಿಟಿ ಸಭೆಯ ನಂತರ ಆಯ್ಕೆಯಾದ ಸದಸ್ಯರ ವಿವರವನ್ನು ವಕ್ತಾರ ಮುಷ್ತಾಕ್ ಹೆನ್ನಾಬೈಲ್ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X