ಮಂಗಳೂರು | ಮುಸ್ಲಿಂ ಲೇಖಕರ ಸಂಘದಿಂದ ಸಾಹಿತಿ ಮಿರ್ಜಾ ಬಶೀರ್‌ಗೆ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ ಪ್ರದಾನ

Date:

Advertisements

ಮುಸ್ಲಿಮ್ ಲೇಖಕರ ಸಂಘವು ಮರ್ಹೂಂ ಯು.ಟಿ.ಫರೀದ್ ಅವರ ಸ್ಮರಣಾರ್ಥ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಮಿರ್ಜಾ ಬಶೀರ್ ಅವರಿಗೆ ಪ್ರದಾನ ಮಾಡಲಾಯಿತು.

ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜು ಅವರಣದಲ್ಲಿರುವ ಸಹೋದಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ಪ್ರಶಸ್ತಿ ಪ್ರದಾನಿಸಿದ ಬಳಿಕ ಮಾತನಾಡಿದ ವಿಧಾನಸಭಾ ಸ್ಪೀಕರ್ ಯು.ಟಿ.ಖಾದ‌ರ್, ಯುವ ಜನಾಂಗಕ್ಕೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಹಿತ್ಯ ಅಗತ್ಯವಾಗಿದೆ. ಯುವ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮುಸ್ಲಿಮ್ ಲೇಖಕರ ಸಂಘ ಮಾಡುತ್ತಿರುವುದು ಶ್ಲಾಘನೀಯ. ತನ್ನ ಕಥಾ ಸಂಕಲನಕ್ಕೆ ಈ ಪ್ರಶಸ್ತಿಯನ್ನು ಪಡೆದಿರುವ ಡಾ.ಮಿರ್ಜಾ ಬಶೀರ್‌ಗೆ ಭವಿಷ್ಯದ ದಿನಗಳಲ್ಲಿ ಸಾಹಿತ್ಯಕ್ಕೆ ನೀಡುವ ಉನ್ನತ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು.

Advertisements
1003027641

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೆಫ್ಟಿನೆಂಟ್ ಭವ್ಯಾ ನರಸಿಂಹ ಮೂರ್ತಿಯವರು, ದ್ವೇಷದ ರಾಜಕಾರಣ ಮತ್ತು ಪ್ರಜಾತಂತ್ರದ ಭವಿಷ್ಯ ಎಂಬ ಕೇಂದ್ರೀಯ ವಿಷಯದಲ್ಲಿ ಮಾತನಾಡಿದರು.

ಅಬ್ರಕಡಬ್ರ ಕಥಾ ಸಂಕಲನಕ್ಕಾಗಿ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪಡೆದ ಡಾ.ಮಿರ್ಜಾ ಬಶೀರ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಎಚ್. ಅಧ್ಯಕ್ಷತೆ ವಹಿಸಿ, ಮಾತನಾಡಿದರು.

1003027640

ಬಳಿಕ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಕವಿಗಳಾದ ಜಲೀಲ್ ಮುಕ್ರಿ, ಶಮೀಮಾ ಕುತ್ತಾರ್, ಬಶೀರ್ ಅಹ್ಮದ್ ಕಿನ್ಯಾ, ಅಕ್ಷತಾ ರಾಜ್ ಪೆರ್ಲ, ಕವನ ವಾಚಿಸಿದರು.

ಹುಸೈನ್ ಕಾಟಿಪಳ್ಳ ಸ್ತುತಿಗೀತೆ ಹಾಡಿದರು. ಹಿರಿಯ ಪತ್ರಕರ್ತ ಏ.ಕೆ.ಕುಕ್ಕಿಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ದರು. ಆಲಿಕುಂಞಿ ಪಾರೆ ವಂದಿಸಿದರು. ಮುಸ್ಲಿಮ್ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಕಾರ್ಯಕ್ರಮ ನಿರೂಪಿಸಿದರು.

1003027663
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X