ಶಿಡ್ಲಘಟ್ಟ | ವಿದ್ಯುತ್‌ ಕಡಿತಗೊಳಿಸಿ ಕೇಂದ್ರದ ವಿರುದ್ಧ ಮುಸಲ್ಮಾನರ ಆಕ್ರೋಶ

Date:

Advertisements

ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆ ಶಿಡ್ಲಘಟ್ಟ ನಗರದ ಮುಸ್ಲೀಂ ನಿವಾಸಿಗಳು ವಿದ್ಯುತ್ ಕಡಿತಗೊಳಿಸುವ ಮೂಲಕ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಮುಸ್ಲಿಂ ಸಮಾಜದ ಹಕ್ಕುಗಳನ್ನು ಕಸಿದುಕೊಳ್ಳುವ ಜೊತೆಗೆ ಮುಸ್ಲಿಂ ಸಮಾಜದ ಪೂರ್ವಜರು ದಾನ ಧರ್ಮದ ರೂಪದಲ್ಲಿ ನೀಡಿರುವ ಸ್ಥಿರ ಮತ್ತು ಚರಾಸ್ತಿಗಳನ್ನು ಲೂಟಿ ಮಾಡಲು ಹುನ್ನಾರ ನಡೆಸಿದೆ ಎಂದು ಮುಸ್ಲಿಂ ಸಮಾಜ ತೀವ್ರ ಆಕ್ರೋಶ ಹೊರಹಾಕಿದೆ.

ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ದೇಶಾದ್ಯಂತ ರಾತ್ರಿ 9:00 ಗಂಟೆಯಿಂದ 9:15ವರೆಗೆ ಮುಸ್ಲಿಂ ಸಮಾಜದವರು ತಮ್ಮ ತಮ್ಮ ಮನೆಗಳು ಮತ್ತು ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕರೆ ನೀಡಿದ್ದರು. ಅವರ ಕರೆಗೆ ಮುಸ್ಲಿಂ ಸಮಾಜ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿ ವಿದ್ಯುತ್ ದೀಪಗಳನ್ನು ಆರಿಸಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Advertisements

ಶಿಡ್ಲಘಟ್ಟ ನಗರದ ಬಹುತೇಕ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಬೀದಿ ದೀಪಗಳು ಮತ್ತು ಮನೆ ದೀಪಗಳನ್ನು ಬಂದ್ ಮಾಡಿದ್ದರಿಂದ ಬಹುತೇಕ ಪ್ರದೇಶಗಳು ಕಗ್ಗತಲಲ್ಲಿ ಮುಳುಗಿದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X