ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ: ಯು ಟಿ ಖಾದರ್

Date:

ನನ್ನಿಂದ ಜನಸಾಮಾನ್ಯರಿಗೆ, ಅಭಿಮಾನಿಗಳಿಗೆ ಹಾಗೂ ನನ್ನ ಜಿಲ್ಲೆಯ ಜನರಿಗೆ ನಿರಾಸೆಯಾಗಲು ನಾನು ಬಿಡುವುದಿಲ್ಲ. ಜನರ ಪ್ರೀತಿಗೆ ನನ್ನ ಸ್ಪೀಕರ್ ಸ್ಥಾನ ಯಾವತ್ತೂ ಅಡ್ಡಿಯಾಗಲ್ಲ. ನಾನು ಯಾರಿಂದಲೂ ದೂರವಾಗಲು ಇಷ್ಟಪಡುವುದಿಲ್ಲ ಎಂದು ನೂತನ ಸಭಾಧ್ಯಕ್ಷ ಯು ಟಿ ಖಾದರ್‌ ಹೇಳಿದರು.

ಸಭಾಧ್ಯಕ್ಷರಾಗಿ ತವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಯು ಟಿ ಖಾದರ್‌ ನಮ್ಮಿಂದ ದೂರವಾಗಲಿದ್ದಾರೆ ಎನ್ನುವ ಅನುಮಾನ ಕೆಲವೇ ತಿಂಗಳಲ್ಲಿ ದೂರವಾಗಲಿದೆ. ಆ ರೀತಿ ನಾನು ನಡೆದುಕೊಳ್ಳುವೆ” ಎಂದು ತಿಳಿಸಿದರು.

“ನಮ್ಮ ಜನರ ಪ್ರೀತಿಗೆ ನನ್ನ ಸಭಾಧ್ಯಕ್ಷ ಸ್ಥಾನ ಅಡ್ಡಿಯಾಗಲ್ಲ. ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ ಮಂತ್ರಿ ಆಗಿರುತ್ತಿದ್ದೆ. ಈಗ ಎಲ್ಲ ಶಾಸಕರು, ಅಧಿಕಾರಿಗಳು ನನ್ನ ವ್ಯಾಪ್ತಿಯಲ್ಲೇ ಬರುತ್ತಾರೆ. ನನ್ನ ಜಿಲ್ಲೆಗೆ ಏನು ಬೇಕು ಅದನ್ನು ಅಲ್ಲಿಂದಲೇ ಮಾಡಿಸುವೆ. ಕ್ಷೇತ್ರದ ಅಭಿವೃದ್ಧಿಯನ್ನು ನಾನು ಮರೆಯುವುದಿಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಸಭಾಧ್ಯಕ್ಷ ಸ್ಥಾನವನ್ನು ನಾನು ಸಂತೋಷದಿಂದಲೇ ಸ್ವೀಕರಿಸಿದ್ದೇನೆ. ಈ ಬಾರಿ ಹೊಸದಾಗಿ ಬಹಳಷ್ಟು ಶಾಸಕರು ಆಯ್ಕೆಯಾಗಿದ್ದಾರೆ. ಅವರಲ್ಲೂ ಹೊಸ ಜ್ಞಾನ, ಹೊಸ ವಿಚಾರ ಇರುತ್ತದೆ. ಅದನ್ನು ಹೊರತಗೆಯಲು ಪ್ರಯತ್ನಿಸುವೆ. ಹೆಚ್ಚಿನ ಅವಕಾಶ ಯುವ ಶಾಸಕರಿಗೆ ಕೊಡುವೆ. ಈ ಮೂಲಕ ರಾಜ್ಯಕ್ಕೆ ಮತ್ತು ನನ್ನ ಜಿಲ್ಲೆಗೆ ಗೌರವ ತಂದುಕೊಡುವ ಪ್ರಯತ್ನ ಮಾಡುವೆ” ಎಂದು ಹೇಳಿದರು.

“ಈ ಹಿಂದೆ ಶಾಸಕನಾಗಿ, ಮಂತ್ರಿಯಾಗಿ ಕೆಲಸ ಮಾಡಿರುವೆ. ಇಂದು ಸಭಾಧ್ಯಕ್ಷ ಆಗಿರುವೆ. ಜನರ ಪ್ರೀತಿ ಉಳಿಸಿಕೊಳ್ಳುವೆ. ಆ ಪೀಠದ ಘನತೆಯನ್ನು ಹೆಚ್ಚಿಸುವೆ” ಎಂದು ಭರವಸೆಯ ಮಾತುಗಳನ್ನಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...