ಮೈಸೂರು | ದುಷ್ಕರ್ಮಿಗಳಿಂದ ಅಂಬೇಡ್ಕರ್ ಭಾವಚಿತ್ರ ವಿರೂಪ; ಪ್ರತಿಭಟನೆ

Date:

Advertisements

ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಸಿಂಧುವಳ್ಳಿ ಗ್ರಾಮದಲ್ಲಿನ ಅಂಬೇಡ್ಕರ್ ಭವನದ ಬಳಿ ‘ಅಂಬೇಡ್ಕರ್ ಯುವಕ ಸಂಘ’ವು ಅಂಬೇಡ್ಕರ್ ಭಾವಚಿತ್ರ ಇರುವ ನಾಮಫಲಕವನ್ನು ಅಳವಡಿಸಿತ್ತು. ಆ ನಾಮಫಲಕವನ್ನು ಕಿಡಿಗೇರಿಗಳು ಸೋಮವಾರ ರಾತ್ರಿ ವಿರೂಪಗೊಳಿಸಿದ್ದಾರೆ.

ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ, ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು, ದಲಿತ ಯುವಕರು ಜಯಪುರ-ಕಡಕೋಳ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಅಂಬೇಡ್ಕರ್ ಭಾವಚಿತ್ರವಿದ್ದ ನಾಮಫಲಕವನ್ನ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು, ವಿರೂಪಗೊಳಿಸಿದ್ದಾರೆ. ಅಂಬೇಡ್ಕರ್ ಭಾವಚಿತ್ರದ ಕಿವಿ, ಕನ್ನಡಕ ಇರುವ ಭಾಗ ವಿರೂಪಗೊಂಡಿದೆ. ನಾಮಫಲಕ ಬಿರುಕು ಬಿಟ್ಟಿದೆ. ಕೃತ್ಯ ಎಸಗಿದೆ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಗ್ರಾಮಕ್ಕೆ ಡಿವೈಎಸ್‌ಪಿ ಕರೀ ರಾವತ್ ಮತ್ತು ಮೈಸೂರು ದಕ್ಷಿಣ ಠಾಣಾ ಪಿಎಸ್ಐ ಶಾಂತಲಿಂಗಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ರೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X